ಹೊಸ ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ರೂಪಿಸಬೇಕಿದೆ. ಇದಕ್ಕಾಗಿ ಗೃಹ ಇಲಾಖೆಯ ಜೊತೆ ಸಭೆ ನಡೆಸಿ ಹೊಸ ಬಗೆಯ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸಲಾಗುವುದು ಎಂದರು.
ಮೂರನೇ ಹಂತದ ಪ್ರಯೋಗ:
ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಈ ಲಸಿಕೆಯನ್ನು ಪ್ರಾಯೋಗಿಕವಾಗಿ ಪಡೆಯಬಹುದು. ಕೊರೊನಾ ವಾರಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಈ ಲಸಿಕೆಯನ್ನು ಪಡೆದು ಪ್ರಯೋಗದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಕ್ಲಿನಿಕಲ್ ಟ್ರಯಲ್ ನಲ್ಲಿ ಪಾಲ್ಗೊಂಡು ಸಹಾಯ ಮಾಡಬಹುದು ಎಂದರು.
ಯು ಕೆ ಯಿಂದ ಬಂದ 14 ಮಂದಿಗೆ ಪಾಸಿಟಿವ್:
ಯು.ಕೆ.ಯಿಂದ ಬಂದ 2,500 ಜನ ಪೈಕಿ, 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 14 ಜನರಿಗೆ ಪಾಸಿಟಿವ್ ಬಂದಿದೆ. ಇವರ ಮಾದರಿಯನ್ನು ನಿಮ್ಹಾನ್ಸ್ ನ ಲ್ಯಾಬ್ ಗೆ ಕಳುಹಿಸಲಾಗಿದೆ. ಈ ಮಾದರಿಗಳನ್ನು ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಇದಕ್ಕೆ 48 ಗಂಟೆಗಳ ಕಾಲ ಬೇಕಾಗುತ್ತದೆ. ವರದಿ ಬಂದ ಬಳಿಕ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಇಡೀ ದೇಶದಲ್ಲಿ ಯು.ಕೆ.ಯಿಂದ ಒಟ್ಟು 38,500 ಜನರು ಬಂದಿದ್ದಾರೆ. ಎಲ್ಲ ರಾಜ್ಯಗಳಿಂದ ಬಂದ ಮಾದರಿ, ವರದಿಯನ್ನು ಕಲೆಹಾಕಿ ಅಂತಿಮ ವರದಿಯನ್ನು ಐಸಿಎಂಆರ್ ಪ್ರಕಟಿಸಲಿದೆ ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ವ್ಯವಸ್ಥೆ ಇದೆ. ನೆಗೆಟಿವ್ ವರದಿ ಇಲ್ಲದವರನ್ನೂ ನಿಲ್ದಾಣದಲ್ಲೇ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment