ರಾಷ್ಟ್ರೀಯ

ಭಾರತೀಯ ಸೇನೆಗೆ ಹೊಸ ಸಮವಸ್ತ್ರ ಅನಾವರಣ

ಭಾರತೀಯ ಯೋಧರಿಗಾಗಿಯೇ ತಯಾರಿಸಲಾದ ನೂತನ ಸಮವಸ್ತ್ರವನ್ನು ಸೇನಾ ದಿನದಂದು ಅನಾವರಣಗೊಳಿಸಲಾಯಿತು.

ಹಲವು ವಿಶೇಷತೆಗಳನ್ನು ಒಳಗೊಂಡ ಸೇನಾ ಸಮವಸ್ತ್ರವನ್ನು ಧರಿಸಿ ಪ್ಯಾರಾಚೂಟ್‌ ರೆಜಿಮೆಂಟ್‌ನ ಕಮಾಂಡೋಗಳ ತುಕಡಿ ಸೇನಾ ದಿನದ ಪಥಸಂಚನದಲ್ಲಿ ಭಾಗವಹಿಸಿತು.

ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಷನ್‌ ಟೆಕ್ನಾಲಜಿ (ಎನ್‌ಐಎಫ್‌ಟಿ) ಸಹಯೋಗದಲ್ಲಿ ಭಾರತ ಸೇನಾಪಡೆಯು ಹೊಸ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ.

ಸೇನೆಗಾಗಿ ವಿನ್ಯಾಸಗೊಳಿಸಿರುವ ಹೊಸ ಸಮವಸ್ತ್ರ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಬ್ರಿಟಿಷ್‌ ಸೈನ್ಯವು ಬಳಸುವ ಮಾದರಿಯಂತೆ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ. ವಿವಿಧ ದೇಶಗಳ ಸೇನಾ ಸಮವಸ್ತ್ರಗಳ ವಿಶ್ಲೇಷಣೆ ಮತ್ತು ವಿಸ್ತೃತ ಚರ್ಚೆ ನಂತರ ಈ ಸಮವಸ್ತ್ರವನ್ನು ಅಂತಿಮಗೊಳಿಸಲಾಗಿದೆ.

ಸೇನಾ ಸಿಬ್ಬಂದಿ ಬಿಸಿಲು, ಚಳಿ, ಮಳೆ-ರಾತ್ರಿ, ಹಗಲೆನ್ನದೇ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಹವಾಮಾನ ಏರಿಳಿತವನ್ನು ಎದುರಿಸಲು ಪೂರಕವಾದ ಸಮವಸ್ತ್ರ ಇದಾಗಿದೆ. ಸಿಬ್ಬಂದಿ ಕಾರ್ಯಕ್ಷೇತ್ರದ ಭೌಗೋಳಿಕ ಸ್ವರೂಪ ಹಾಗೂ ಹವಾಮಾನ ಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದನ್ನು ರೂಪಿಸಲಾಗಿದೆ.

ಹೊಸ ಸಮವಸ್ತ್ರವು ಮಣ್ಣು ಮತ್ತು ಹಸಿರು ಬಣ್ಣದ ಮಿಶ್ರಣದಿಂದ ಕೂಡಿದೆ. ಹಳೆಯ ಸಮವಸ್ತ್ರಕ್ಕೆ ಹೋಲಿಸಿದರೆ ವಿಭಿನ್ನವಾಗಿದೆ. ಸೇನಾ ಸಿಬ್ಬಂದಿ ಧರಿಸಲು ತುಂಬಾ ಕಂಫರ್ಟ್‌ ಆಗಿರುವಂತೆ ವಿನ್ಯಾಸಗೊಳಿಸಲಾಗಿದೆ.

ನೂತನ ಸಮವಸ್ತ್ರವು ಡಿಜಿಟಲ್‌ ಕಣ್ಗಾವಲಿಗೂ ಸುಲಭವಾಗಿ ನಿಲುಕುವುದಿಲ್ಲ. ಮೇಲ್ನೋಟಕ್ಕೆ ಸಿಬ್ಬಂದಿ ಇರುವಿಕೆಯನ್ನು ಗುರುತಿಸಲಾಗದ ಸಮವಸ್ತ್ರ ಇದಾಗಿದೆ.

ಈ ಸಮವಸ್ತ್ರ ಮುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕವಾಗಿ ಲಭ್ಯವಿರುವುದಿಲ್ಲ ಎಂಬ ವಿಚಾರವನ್ನು ಮೂಲಗಳು ಸ್ಪಷ್ಟಪಡಿಸಿವೆ.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024