January 30, 2026

Newsnap Kannada

The World at your finger tips!

punit rahul

ಪುನೀತ್ ನಿಧನದ ಸುದ್ದಿ ಅರಗಿಸಿಕೊಳ್ಳದ ಅಭಿಮಾನಿ ಆತ್ಮಹತ್ಯೆ

Spread the love

ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲಾಗದೇ ಮತ್ತೊಬ್ಬ ಅಪ್ಪಟ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ರಾಹುಲ್‌ ಗಾಡಿವಡ್ಡರ್ (22) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಂಜೆ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ರಾಹುಲ್ ಗೆಳೆಯರೊಟ್ಟಿಗೆ ಸೇರಿ ಶ್ರದ್ಧಾಂಜಲಿ ಸಲ್ಲಿಸಿದ್ದ.

ನಂತರ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!