ಕರ್ನಾಟಕ ಸೇರಿದಂತೆ ಒಟ್ಟು 6 ರಾಜ್ಯಗಳ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆದಿದೆ, ಐಎಸ್ಐಎಸ್ ಉಗ್ರ ಸಂಘಟನೆ ಚಟುವಟಿಕೆ ಸಂಬಂಧಿತ ಮಾಹಿತಿಯ ಮೇರೆಗೆ ರಾಜ್ಯದ ಕಾರವಾರದ ಭಟ್ಕಳ ಹಾಗೂ ತುಮಕೂರಿನಲ್ಲೂ ಎನ್ಐಎ ಮಿಂಚಿನ ಕಾರ್ಯಾಚರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದನ್ನು ಓದಿ –ಫಾಸಿಲ್ ಹತ್ಯೆಗೆ ಬಳಕೆ ಮಾಡಿದ ಕಾರು ಕಾರ್ಕಳ ಬಳಿ ಪತ್ತೆ
ಜೂನ್ 25 ರಂದು ಬೆಂಗಳೂರಿನಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ ತನಿಖೆ ಮುಂದುವರೆಸಿದ್ದ ಎನ್ಐಎ, ಜುಲೈ 31 ರಂದು ಮಧ್ಯ ಪ್ರದೇಶದ ಎರಡು ಕಡೆ, ಗುಜರಾತ್ ರಾಜ್ಯದ ನಾಲ್ಕು ಕಡೆ, ಮಹಾರಾಷ್ಟ್ರ, ಕರ್ನಾಟಕದಲ್ಲಿ ತಲಾ ಎರಡು ಕಡೆ ಹಾಗೂ ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಬೆಳ್ಳಂಬೆಳಗ್ಗೆ 4 ಗಂಟೆಗೆ ದಾಳಿ ನಡೆಸಿದೆ.
ದಾಳಿ ವೇಳೆ ಹಲವಾರು ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ. ಶಂಕಿತರನ್ನು ಉಗ್ರರನ್ನು ವಶಪಡಿಸಿಕೊಂಡು ಐಪಿಸಿ 153A, 153B UAPA 18b ,38, 39,40 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು