ದೇಶಾದ್ಯಂತ ಭಾನುವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಏಕಾಏಕಿ 6 ರಾಜ್ಯಗಳ 13 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ ಸೇರಿದಂತೆ ಒಟ್ಟು 6 ರಾಜ್ಯಗಳ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆದಿದೆ, ಐಎಸ್ಐಎಸ್ ಉಗ್ರ ಸಂಘಟನೆ ಚಟುವಟಿಕೆ ಸಂಬಂಧಿತ ಮಾಹಿತಿಯ ಮೇರೆಗೆ ರಾಜ್ಯದ ಕಾರವಾರದ ಭಟ್ಕಳ ಹಾಗೂ ತುಮಕೂರಿನಲ್ಲೂ ಎನ್ಐಎ ಮಿಂಚಿನ ಕಾರ್ಯಾಚರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದನ್ನು ಓದಿ –ಫಾಸಿಲ್ ಹತ್ಯೆಗೆ ಬಳಕೆ ಮಾಡಿದ ಕಾರು ಕಾರ್ಕಳ ಬಳಿ ಪತ್ತೆ
ಜೂನ್ 25 ರಂದು ಬೆಂಗಳೂರಿನಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ ತನಿಖೆ ಮುಂದುವರೆಸಿದ್ದ ಎನ್ಐಎ, ಜುಲೈ 31 ರಂದು ಮಧ್ಯ ಪ್ರದೇಶದ ಎರಡು ಕಡೆ, ಗುಜರಾತ್ ರಾಜ್ಯದ ನಾಲ್ಕು ಕಡೆ, ಮಹಾರಾಷ್ಟ್ರ, ಕರ್ನಾಟಕದಲ್ಲಿ ತಲಾ ಎರಡು ಕಡೆ ಹಾಗೂ ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಬೆಳ್ಳಂಬೆಳಗ್ಗೆ 4 ಗಂಟೆಗೆ ದಾಳಿ ನಡೆಸಿದೆ.
ದಾಳಿ ವೇಳೆ ಹಲವಾರು ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ. ಶಂಕಿತರನ್ನು ಉಗ್ರರನ್ನು ವಶಪಡಿಸಿಕೊಂಡು ಐಪಿಸಿ 153A, 153B UAPA 18b ,38, 39,40 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ