ಜುಲೈ 2023 ರಲ್ಲಿ ಕೇಂದ್ರ ಅಪರಾಧ ವಿಭಾಗವು ಲಷ್ಕರ್-ಎ-ತೈಬಾ ಮಾಡ್ಯೂಲ್ ಅನ್ನು ಭೇದಿಸಿತ್ತು. ನಂತರ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು.ಸಿಸಿಬಿ ಪೊಲೀಸರು ಕಳೆದ ವರ್ಷ ಜುಲೈನಲ್ಲಿ ಆರ್ಟಿ ನಗರದ ಮನೆಯೊಂದರಿಂದ ಐವರನ್ನು ಬಂಧಿಸುವ ಮೂಲಕ ಲಷ್ಕರ್ ಭಯೋತ್ಪಾದನಾ ಘಟಕವನ್ನು ಭೇದಿಸಿದ್ದರು.
ಪೊಲೀಸರು ನಾಲ್ಕು ಜೀವಂತ ಗ್ರೆನೇಡ್ಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಗರದಲ್ಲಿ ಆರೋಪಿಗಳು ಅಶಾಂತಿ ಸೃಷ್ಟಿಸಲು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರ ಚಟುವಟಿಕೆ ಕುರಿತಂತೆ ಖಚಿತ ಸುಳಿವು ಹಾಗೂ ಹಲವು ದಿನಗಳ ಟ್ರ್ಯಾಕಿಂಗ್ ಆಧಾರದ ಮೇಲೆ, ಸಿಸಿಬಿ ಪೊಲೀಸರು ಕಳೆದ ವರ್ಷ ಜುಲೈ 18 ರಂದು ಆರ್ಟಿ ನಗರದ ಸುಲ್ತಾನ್ ಪಾಳ್ಯದ ಮನೆಯ ಮೇಲೆ ದಾಳಿ ನಡೆಸಿ ಐವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದರು.
ಪೊಲೀಸರ ಪ್ರಕಾರ ನಗರದಲ್ಲಿ ದೊಡ್ಡ ಭಯೋತ್ಪಾದಕ ದಾಳಿಗೆ ಯೋಜಿಸುತ್ತಿದ್ದು ,ದಾಳಿಯ ಸಮಯದಲ್ಲಿಬಂಧಿತ ವ್ಯಕ್ತಿಗಳಲ್ಲಿ ಒಬ್ಬನ ಮನೆಯಲ್ಲಿ ನಾಲ್ಕು ಜೀವಂತ ಗ್ರೆನೇಡ್ಗಳನ್ನು ಪೊಲೀಸರು ಕಂಡುಕೊಂಡರು.ಇಂದು ರಾಜ್ಯದ ಬರ ನಿರ್ವಹಣೆ ಬಗ್ಗೆ ಮಹತ್ವದ ಸಭೆ
ಪೊಲೀಸರು ದಾಳಿಯಲ್ಲಿ 7 ದೇಶ ನಿರ್ಮಿತ ಬಂದೂಕುಗಳು ಮತ್ತು 45 ಸುತ್ತು ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು