ಪಾಕಿಸ್ತಾನದ ಉಗ್ರ ಸಂಘಟನೆ ಯೊಂದಿಗೆ ನಂಟಿನ ಶಂಕೆಯಿಂದಾಗಿ ರಾಷ್ಟ್ರೀಯ ತನಿಖಾ ದಳ ದೆಹಲಿ, ಕೇರಳ, ಕರ್ನಾಟಕ ಸೇರಿದಂತೆ ಹತ್ತು ಕಡೆಗಳಲ್ಲಿ ಸೋಮವಾರ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದುಕೊಂಡಿದೆ.
ಪಾಕಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಇಟ್ಟುಕೊಂಡು ದುಷ್ಕೃತ್ಯ ಎಸಗಲು ಯೋಜನೆ ಹಾಕಿದ್ದ ಶಂಕೆಯಲ್ಲಿ ಭಾರತದ ಆರೇಳು ಮಂದಿ ಮೇಲೆ ಗುಪ್ತಚರ ಇಲಾಖೆ ನಿಗಾ ಇರಿಸಿತ್ತು. ಸದ್ಯಕ್ಕೆ ಐದು ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಲಾಗಿದೆ.
ಪಾಕಿಸ್ತಾನಿ ಸಂಘಟನೆಗಳೊಂದಿಗೆ ಈ ಐವರು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದರು.ಪಾಕಿಸ್ತಾನವು ಸಾಮಾಜಿಕ ಜಾಲತಾಣದ ಮೂಲಕ ಭಾರತದ ಯುವಕರೊಂದಿಗೆ ಸಂಪರ್ಕ ಸಾಧಿಸಿ, ಆನ್ಲೈನ್ನಲ್ಲಿಯೇ ತರಬೇತಿ ನೀಡುತ್ತಿತ್ತು. ಸ್ಥಳೀಯವಾಗಿ ದಾಳಿ ನಡೆಸಲು ಅವರನ್ನು ಪ್ರೇರೇಪಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ