January 29, 2026

Newsnap Kannada

The World at your finger tips!

punith sakkarebailu1

ಸಕ್ಕರೆಬೈಲು ಬಿಡಾರದ ಮರಿ ಆನೆಗೆ ಅಪ್ಪು ಹೆಸರು ನಾಮಕರಣ

Spread the love

ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರದ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡಲಾಗಿದೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೇ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು.

ವನ್ಯಜೀವಿ ರಕ್ಷಣೆಗೋಸ್ಕರ ಮತ್ತು ಅರಣ್ಯ ಸಂರಕ್ಷಣೆ ಕುರಿತ ಸಾಕ್ಷ್ಯ ಚಿತ್ರ ಚಿತ್ರೀಕರಣಕ್ಕಾಗಿ ಆಗಮಿಸಿದ್ದರು.

punith sakkrebailu

ಈ ವೇಳೆ ಬಿಡಾರದಲ್ಲಿದ್ದ ಮರಿಯಾನೆಗೆ ಅಪ್ಪಿ ಮುದ್ದಾಡಿದ್ದರು. ಹೀಗಾಗಿ ಈ ಮರಿ ಗಜಕ್ಕೆ ಪವರ್ ಸ್ಟಾರ್ ಹೆಸರು ಇಡಬೇಕು ಎಂಬುದು ಮಾವುತರು, ಕಾವಾಡಿಗಳು, ಪ್ರವಾಸಿಗರ ಆಸೆಯಾಗಿದೆ.
ಅರಣ್ಯಾಧಿಕಾರಿಗಳು ಸಕ್ಕರೆಬೈಲು ಆನೆ ಬಿಡಾರದ ಮರಿಯಾನೆಗೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡಿದ್ದಾರೆ.

ಮರಿಯಾನೆಗಳಿಗೆ ಹುಟ್ಟಿದ ಕೂಡಲೇ ನಾಮಕರಣ ಮಾಡುವುದಿಲ್ಲ. ಬದಲಾಗಿ ಮರಿಯಾನೆಯನ್ನು ಅದರ ತಾಯಿಯಾನೆಯಿಂದ ಬೇರ್ಪಡಿಸುವ ಪ್ರಕ್ರಿಯೆ ನಡೆಸಿ, ಅದನ್ನು ಪ್ರತ್ಯೇಕವಾಗಿ ಇರಿಸಿದ ಬಳಿಕ ಮರಿಯಾನೆಗೆ ನಾಮಕರಣ ಮಾಡಲಾಗುತ್ತದೆ. ಈ ಪ್ರಕ್ರಿಯೆಯನ್ನು ವೀನಿಂಗ್ ಎಂದು ಕರೆಯುತ್ತಾರೆ.

error: Content is protected !!