ಕಳೆದ ಲೋಕಸಭಾ ಚುನಾವಣೆಯಲ್ಲಿನ ಮಂಡ್ಯ ಸೋಲನ್ನು ನಿಖಿಲ್ ಕುಮಾರಸ್ವಾಮಿ ಇನ್ನೂ ಮರೆತಿಲ್ಲ.
ಲೋಕಸಭೆ ಸೋಲನ್ನು ನೆನೆದು ನಿಖಿಲ್ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಬಾವುಕರಾದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್ ಅಂದು ಮಂಡ್ಯದ ಎಲ್ಲಾ ಶಾಸಕರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದಾಗ ಅವರ ಅಭಿಪ್ರಾಯದಂತೆ ನಾನು ಚುನಾವಣೆಗೆ ನಿಂತೆ ಎಂದರು.
ಚುನಾವಣೆಯಲ್ಲಿ ಸೋತಿರೋದು ನಂಗೆ ಚಿಂತೆ ಇಲ್ಲ ನೀವು ನಾನು ಗೆಲ್ಲುತ್ತೇನೆ ಅಂದುಕೊಂಡು ಲಕ್ಷಾಂತರ, ಕೋಟ್ಯಾಂತರ ರೂಪಾಯಿಯನ್ನು ನನ್ನ ಪರ ಬೆಟ್ಟಿಂಗ್ ಕಟ್ಟಿದ್ದೀರಿ. ಎಷ್ಟೋ ಜನ ನನ್ನ ಸೋಲಿನಿಂದ ಮನೆ-ಮಠ ಕಳೆದುಕೊಂಡಿದ್ದಾರೆ ಇದು ನನಗೆ ತುಂಬಾ ನೋವಾಗುತ್ತಿದೆ ಎಂದರು ನಿಖಿಲ್
ಆ ಚುನಾವಣೆಯಲ್ಲಿ ನನ್ನ ವಿರೋಧಯಾಗಿ ನಿಂತಿದ್ದವರಿಗೆ ಜಿಲ್ಲೆಯಲ್ಲಿ ಅಷ್ಟು ಜನ ಸಂಪರ್ಕ ಇರಲಿಲ್ಲ. ಆದರೂ ಕುಮಾರಣ್ಣನವರ ಶಕ್ತಿ ಕುಗ್ಗಿಸಲು ವಿರೋಧಿ ಬಣ ಸೃಷ್ಟಿಯಾದವು ಎಂದು ಅಂದಿನ ದಿನಗಳನ್ನು ನೆನದುಕೊಂಡರು.
ಸಂಸದೆ ಸುಮಲತಾ ಹೆಸರು ಹೇಳದೆ ನ ವಾಗ್ದಾಳಿ ನಡೆಸಿದ ನಿಖಿಲ್ ನಾನು ಸೋತರು ನನಗೆ ಬೇಸರ ಆಗಿಲ್ಲ.ನನಗೂ ಚುನಾವಣೆಗೂ ಮೊದಲು ಮಂಡ್ಯ ಕ್ಷೇತ್ರದ ಬಗೆಗೆ ಅಷ್ಟೊಂದು ಒಡನಾಟ ಇರಲಿಲ್ಲ. ಅಲ್ಲದೆ ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯ ಬೇಕಿರಲಿಲ್ಲ ಎಂದು ಹೇಳುತ್ತಲೇ ಸೋಲಿನ ಬಗ್ಗೆ ವಿಶ್ಲೇಷಣೆ ಮಾಡಿದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment