ಚನ್ನಪಟ್ಟಣ ಉಪ ಚುನಾವಣೆ ಕಣಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರವೇಶ

Team Newsnap
0 Min Read

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯ ಕಣಕ್ಕೆ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ರಂಗ ಪ್ರವೇಶ ಮಾಡಿದ್ದಾರೆ.

ಟಿಕೆಟ್‌ ವಿಷಯದಲ್ಲಿ ಇದುವರೆಗೆ ಮೌನವಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಇದೀಗ ಪುತ್ರನನ್ನು ಕ್ಷೇತ್ರಕ್ಕೆ ಕಳಿಸಲು ಮುಂದಾಗಿದ್ದಾರೆ.

ಇದನ್ನು ಓದಿ –ಮದ್ಯ ಪ್ರಿಯರಿಗೆ ಸಿಹಿ ಸುದ್ದಿ – ದುಬಾರಿ ಮದ್ಯದ ದರ ಇಳಿಕೆ

ಟಿಕೆಟ್‌ಗಾಗಿ ಇದುವರೆಗೆ ಕ್ಷೇತ್ರದಲ್ಲಿ ಅನುರಣಿಸುತ್ತಿದ್ದ ಸಿಪಿವೈ ಹೆಸರಿನ ಜೊತೆಗೆ ನಿಖಿಲ್ ಹೆಸರೂ ಸೇರಿಕೊಂಡಿದ್ದು ,ಈ ಬೆಳವಣಿಗೆ ಎರಡೂ ಪಕ್ಷಗಳ ಬಲ ಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

Share This Article
Leave a comment