ಕೇಂದ್ರ ಬಜೆಟ್ ಮಂಡನೆಗೆ ಒಂದೇ ದಿನ ಬಾಕಿ ಉಳಿದಿದೆ. ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ದಿನ, ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಸಂಸತ್ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು, ನಾಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 5ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಮೋದಿ ಸರ್ಕಾರದ 2ನೇ ಅವಧಿಯ 5ನೇ ಮತ್ತು ಕೊನೆ ಪೂರ್ಣ ಬಜೆಟ್ ಆಗಿರಲಿದೆ. ಹೀಗಾಗಿ ಹಲವು ಜನಪರ ಯೋಜನೆಗಳು ಪ್ರಕಟಿಸುವ ಸಾಧ್ಯತೆ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮುಂಗಡಪತ್ರ ಮಂಡಿಸಲಿದ್ದಾರೆ. 2023-24ರ ಬಜೆಟ್, ಮುಂಬರುವ ಲೋಕಸಭೆ ಎಲೆಕ್ಷನ್ಗೆ ಪೂರಕವಾಗಿ ಸಿದ್ಧಗೊಂಡಿರಲಿದೆ ಎಂದು ಅಂದಾಜಿಸಲಾಗುತ್ತಿದೆ ಅಲ್ಲದೆ, ದೇಶದ 9 ರಾಜ್ಯಗಳ ವಿಧಾನಸಭೆ ಚುನವಣೆಯ ಮೇಲೂ ಬಜೆಟ್ ಕೇಂದ್ರೀಕೃತವಾಗಿರಲಿದೆ.
ಇಂದಿನಿಂದ ಆರಂಭವಾಗುವ ಅಧಿವೇಶನ, ಫೆಬ್ರವರಿ 13ರ ವರೆಗೆ ಮುಂದುವರಿಯುವ ಸಾಧ್ಯತೆಯಿದೆ.ರಾಜ್ಯದಲ್ಲಿ 13 ಐಪಿಎಸ್ ಅಧಿಕಾರಿಗಳು ವರ್ಗಾವಣೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ