ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಕುಪೇಂದ್ರ ರೆಡ್ಡಿಯನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಿಬೇಕು ಎಂಬ ಜೆಡಿಎಸ್ ಕನಸನ್ನು ಮಾಜಿ ಸಿಎಂ ಸಿದ್ದರಾಮಯ್ಯ ನುಚ್ಚುನೂರು ಮಾಡಿದ್ದಾರೆ,ರಾಜ್ಯಸಭಾ ಕಣದಿಂದ ಯಾವುದೇ ಕಾರಣಕ್ಕೂ ನಮ್ಮ ಎರಡನೇ ಅಭ್ಯರ್ಥಿಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದು ಈ ನಿರ್ಧಾರದಿಂದಾಗಿ ಜೆಡಿಎಸ್ ಕನಸು ಭಗ್ನ ವಾಗಲಿದೆ, ಸಿದ್ದರಾಮಯ್ಯರ ಒತ್ತಾಸೆಯ ಮೇರೆಗೆ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ರನ್ನ ಇಳಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ನ ಎರಡನೇ ಅಭ್ಯರ್ಥಿಯ ನಾಮಪತ್ರವನ್ನು ವಾಪಸ್ ಪಡೆದು, ನಮಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಇದನ್ನು ಓದಿ – ಮಂಡ್ಯದ ವಿಕಲಾಂಗನ ಸಮಸ್ಯೆಗೆ ಎರಡೇ ದಿನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ
ಆದರೆ ಇದಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೊಪ್ಪು ಹಾಕಿಲ್ಲ. ನನ್ನ ಕೇಳಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಿಲ್ಲ ಎಂದು ಖಡಕ್ ಆಗಿ ಹೇಳಿರುವ ಸಿದ್ದರಾಮಯ್ಯ, ಹೈಕಮಾಂಡ್ ನಾಯಕರೇ 2ನೇ ಅಭ್ಯರ್ಥಿ ಹಾಕಿ ಎಂದಿದ್ದಾರೆ. ನಾವು ಗೆಲ್ತೇವೆ ಎಂದು 2ನೇ ಅಭ್ಯರ್ಥಿ ಹಾಕಿದ್ದೇವೆ. ಜೆಡಿಎಸ್ನವರು ನನ್ನ ಕೇಳಿ ಅಭ್ಯರ್ಥಿ ಹಾಕಿದ್ದಾರಾ? ಬೇರೆಯವರು ಆತ್ಮ ಸಾಕ್ಷಿಯಿಂದ ಮತ ಹಾಕ್ತಾರೆ. ಬೇರೆಯವರು ಯಾರೆಂದು ನಾನು ಹೇಳಲ್ಲ. ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ