ಬೆಲ್ಲದ ಮೇಲೆ ಶೇ.5 ಜಿಎಸ್ಟಿ ವಿಧಿಸಿರುವುದನ್ನು ವಾಪಸ್ ಪಡೆಯಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೇಂದ್ರದ ವಿತ್ತ ಸಚಿವರಿಗೆ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿನ ಕಬ್ಬು ಬೆಳೆಗಾರರಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿನ ಬೆಳೆಗಾರರಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ದರ (ಎಫ್ಆರ್ಪಿ) ಕಡಿಮೆಯೇ ಇದೆ ಎಂದಿದ್ದಾರೆ.ಇದನ್ನು ಓದಿ –ತೈವಾನ್ ನಂತರ ಜಪಾನಿನ ಮೇಲೂ ಚೀನಾ ಕ್ಷಿಪಣಿ ದಾಳಿ
ನವದೆಹಲಿಯಲ್ಲಿ ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಮನವಿ ಸಲ್ಲಿಸಿದರು.
ಉತ್ತರದ ರಾಜ್ಯಗಳನ್ನು ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ಇರುವ ಬೆಲ್ಲ ತಯಾರಿಕಾ ಘಟಕಗಳ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ವಿವರಿಸಿದರು. ಮಂಡ್ಯ ಜಿಲ್ಲೆ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಕೂಡ ಕಬ್ಬು ಬೆಳೆಗಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ವಿತ್ತ ಸಚಿವರಿಗೆ ವಿವರಿಸಿದರು.
ಮನವಿಯನ್ನು ಪರಿಶೀಲಿಸಿದ ನಿರ್ಮಲಾ ಸೀತಾರಾಮನ್ ಅವರು, ಬೆಲ್ಲಕ್ಕೆ ಶೇ.5 ಜಿಎಸ್ಟಿ ವಿಧಿಸಿದ ಬಗ್ಗೆ ಮಂಡಳಿಯ ಗಮನಕ್ಕೆ ತಂದು ಪರಿಶೀಲಿಸಲಾಗುತ್ತದೆ. ಜತೆಗೆ ಇತರ ಕೋರಿಕೆಗಳಿಗೆ ಸ್ಪಂದಿಸಿ ಪರಿಹಾರ ಸೂತ್ರ ಪ್ರಕಟಿಸುವುದಾಗಿ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ