ರಾಜ್ಯದ ಬಿಜೆಪಿ ನೇತೃತ್ವದ
ಸರ್ಕಾರಕ್ಕೆ ಜಾರಕಿಗೊಳಿ ಸಹೋದರರಿಂದ ಬೆದರಿಕೆ ಇದೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಮೇಗೌಡರು
ಎಸ್ಐಟಿ ತನಿಖೆಯಿಂದ ಜಾರಕಿಹೊಳಿಗೆ ಕ್ಲೀನ್ಚಿಟ್ ಸಿಗುವುದರಲ್ಲಿ ಅನುಮಾನವಿಲ್ಲ ಎಂದರು.
ಒಬ್ಬ ಅತ್ಯಾಚಾರಿ ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ ಯನ್ನು ಖುದ್ದು ಮುಖ್ಯಮಂತ್ರಿಗಳೆ ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ.
ಹೀಗಿರುವಾಗ ಎಸ್ ಐಟಿ ತನಿಖೆ ಹಳ್ಳ ಹಿಡಿಯುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.
ಆರೋಪಿಯನ್ನು ಬಂಧಿಸದಿದ್ರೆ ಸಿಬಿಐ ತನಿಖೆಗೆ ಒತ್ತಾಯಿಸಿ ನಾವೇ ಖಾಸಗಿ ಪಿಐಎಲ್ ಹಾಕ್ತಿವಿ. ಮುಂದೆ ನಮ್ಮ ಸರ್ಕಾರ ಬಂದ್ರೆ ಸಿಬಿಐ ತನಿಖೆಗೆ ಪ್ರಕರಣವನ್ನ ವಹಿಸುತ್ತೇವೆ. ಎಂದು ತಿಳಿಸಿದರು.
ಡ್ರಗ್ ಕೇಸ್ ರೀತಿ ಸಿಡಿ ಕೇಸ್ ಕೂಡ ಹಳ್ಳ ಹಿಡಿಯುತ್ತದೆ. ಡ್ರಗ್ ಕೇಸ್ನಲ್ಲಿ ಬಿಲ ಅಗೆದು ಇಲಿ ಹಿಡಿಯುವ ಹಾಗೆ
ಬೇಕಾದವರನ್ನು ಬಿಟ್ಟು, ಬೇಡದವರನ್ನು ಹಿಡಿದರು. ಅದೇ ರೀತಿ ಈ ಕೇಸ್ ಸಹ ಹಳ್ಳ ಹಿಡಿಯುತ್ತದೆ. ಪೊಲೀಸರು ಸರ್ಕಾರ ಅನ್ನ ತಿನ್ನುತ್ತಿದ್ದೇವೆ ಎಂದರೆ ಜಾರಕಿಹೊಳಿಯನ್ನು ಬಂಧಿಸಬೇಕಿತ್ತು.
ಆದ್ರೆ ಇಲ್ಲಿವರೆಗೆ ಬಂಧಿಸುವ ಕೆಲಸ ಆಗಿಲ್ಲ ಎಂದರು.
ಈ ನಾವು ಕೋರ್ಟ್ನಲ್ಲಿ ಈ ಬಗ್ಗೆ ಖಾಸಗಿ ಕೇಸ್ ಹಾಕಿ, ಸಿಬಿಐಗೆ ವಹಿಸಲು ಹೋರಾಟ ಮಾಡುತ್ತೇವೆ. ಕುಮಾರಸ್ವಾಮಿ ಸರ್ಕಾರ ಬಂದಾಗ ಈ ಕೇಸ್ ಬಗ್ಗೆ ಸಿಬಿಐ ತನಿಖೆ ಮಾಡಿಸುತ್ತೇವೆ. ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ.
ಎಸ್ಐಟಿ ಅವರು ಸರಿಯಾಗಿ ಕೆಲಸ ಮಾಡುತ್ತಾರೆ ಎಂದು ಗ್ಯಾರಂಟಿ ಇಲ್ಲ ಎಂದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment