ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕಾಗಿ ಸೋನಾಕ್ಷಿಯನ್ನು ಮೊರಾದಾಬಾದ್ಗೆ ಬರುವಂತೆ ಕೇಳಲಾಗಿತ್ತು. ಅದಕ್ಕಾಗಿ 37 ಲಕ್ಷ ರೂ. ಹಣವನ್ನು ನೀಡಲಾಗಿತ್ತು. ಆದರೆ ಸೋನಾಕ್ಷಿ ಗೈರಾಗಿದ್ದರು ಇದೀಗ ನ್ಯಾಯಾಲಯ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿದೆ.
ಕಾರ್ಯಕ್ರಮ ಆಯೋಜಕ ಪ್ರಮೋದ್ ಶರ್ಮಾ, ಮೊರಾದಾಬಾದ್ನ ಕಟ್ಘರ್ ಪೋಲಿಸ್ ಠಾಣೆ ಪ್ರದೇಶದ ನಿವಾಸಿಯಾಗಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಸೋನಾಕ್ಷಿಯನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದರು. ಈವೆಂಟ್ನಲ್ಲಿ ಸೋನಾಕ್ಷಿ ಭಾಗವಹಿಸಲಿಲ್ಲ.
ಆಗ ಈವೆಂಟ್ ಆಯೋಜಕರು ಹಣವನ್ನು ಮರುಪಾವತಿ ಮಾಡುವಂತೆ ಹೇಳಿದ್ದಾರೆ. ಈವೆಂಟ್ ಆಯೋಜಕರಿಗೆ ಹಣ ನೀಡಲು ಸೋನಾಕ್ಷಿ ಮ್ಯಾನೇಜರ್ ನಿರಾಕರಿಸಿದ್ದರು ಎನ್ನಲಾಗಿದೆ.
ಸೋನಾಕ್ಷಿ ಸಿನ್ಹಾ ಅವರಿಗೆ ಹಲವು ಬಾರಿ ಕರೆ ಮಾಡಿದರೂ ಹಣ ಸಿಗದಿದ್ದಾಗ ವಂಚನೆ ಪ್ರಕರಣ ದಾಖಲಾಗಿತ್ತು.
ಗೈರು ಹಾಜರಾಗಿದ್ದರಿಂದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯ ಇದೀಗ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್