ದೊಡ್ಡಕೆರೆಗೆ ತಡೆ ಗೋಡೆ ಇಲ್ಲದ ಕಾರಣ ಕಾರು ಉರುಳಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಜರುಗಿದೆ
ಚಿತ್ರದುರ್ಗ ತಾಲೂಕಿನ ಕೋಡಿರಂಗ ವನಹಳ್ಳಿಯಿಂದ ಭರಮಸಾಗರದ ಕಡೆಗೆ ಗುರುವಾರ ತಡರಾತ್ರಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ
ಕಾರಿನಲ್ಲಿದ್ದ ತುಮಕೂರು ನಿವಾಸಿ ಜಿ. ರಮೇಶ್ (40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
25 ವರ್ಷಗಳ ಬಳಿಕ ತುಂಬಿದ್ದ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ದೊಡ್ಡಕೆರೆ ಏರಿ ಮೇಲೆ ಬರುತ್ತಿದ್ದ ಕಾರು ಕೆರೆಗೆ ಪಲ್ಟಿಯಾಗಿ ದುರ್ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ಕೆರೆಯಲ್ಲಿ ನೀರಿನೊಳಗೆ ಕಾರಿನ ಹೆಡ್ ಲೈಟ್ ಉರಿಯುತ್ತಿದ್ದ ಬೆಳಕನ್ನು ನೋಡಿದ ಸಾರ್ವಜನಿಕರು ಅಚ್ಚರಿಯಾಗಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಕಾರನ್ನು ಹೊರ ತೆಗೆದಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!