Main News

ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶವೇ ಇಲ್ಲ: ಜಮೀರ್ ಅಹ್ಮದ್ ಖಾನ್

ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶವೇ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅವರು, ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ತ್ರಿವರ್ಣ ಧ್ವಜಾರೋಹಣ, ಜನವರಿ 26ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶ ಇದೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಈದ್ಗಾ ಮೈದಾನ ಕಂದಾಯ ಇಲಾಖೆ ಸ್ವತ್ತು ಎಂದು ಈಗಾಗಲೇ ಬಿಬಿಎಂಪಿ ಹೇಳಿದೆ. ಆದರೆ ಇದು ನಮ್ಮ ಸ್ವತ್ತು ಎಂದು ರಾಜ್ಯ ವಕ್ಫ್‌ ಬೋರ್ಡ್‌ ವಾದಿಸುತ್ತಿದೆ. ಇಷ್ಟಾದ್ರೂ ಇದು ಕಾನೂನು ವಿಚಾರವಾಗಿದೆ ಅದನ್ನು ವಕ್ಫ್‌ ಬೋರ್ಡ್‌ ತೀರ್ಮಾನಿಸುತ್ತದೆ ಎಂದು ಜಮೀರ್ ಹೇಳಿದ್ದಾರೆ. ಇದನ್ನು ಓದಿಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು; ಇತಿಹಾಸ ನಿರ್ಮಿಸಿದ ಆಟಗಾರ್ತಿ!

ಸಾಮಾನ್ಯವಾಗಿ ರಾಜ್ಯಾದ್ಯಂತ ವಕ್ಫ್‌ ಹಾಗೂ ಮುಜರಾಯಿ ಆಸ್ತಿಗಳೆಲ್ಲವೂ 1999ಕ್ಕೆ ಮುನ್ನ ಕಂದಾಯ ಇಲಾಖೆ ವ್ಯಾಪ್ತಿಯಲ್ಲೇ ಇತ್ತು. ನಂತರ ಎಸ್‌. ಎಂ. ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಇದರ ವಿಂಗಡಣೆ ಆಗಿತ್ತು ಎಂದು ಜಮೀರ್ ಮಾಹಿತಿ ನೀಡಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲಾಗುತ್ತಿತ್ತು. ಈ ಪರಿಪಾಠವನ್ನು ಪ್ರತಿ ವರ್ಷ ಮುಂದುವರೆಸಲಾಗುವುದು ಎಂದು ಜಮೀರ್ ಹೇಳಿದರು

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024