ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರೈತರ ಪರ, ದಲಿತರ ಪರ, ಯುವಕರ ಪರ ಕಾಮನ್ ಮ್ಯಾನ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವದಂತಿ ಬಗ್ಗೆ ಮಾತನಾಡಿದ ಅರುಣ್ ಸಿಂಗ್ ಅವರು, ಸಿಎಂ ಬದಲಿಸುವ ಪ್ರಶ್ನೆ ಇಲ್ಲ, ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಿದ್ದೇವೆ. ಪೂರ್ಣ ಪ್ರಮಾಣದ ಬಹುಮತ ಸಿಗಲಿದ್ದು, ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನು ಓದಿ –ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಕನ್ನಡದಲ್ಲೇ ಮೋದಿ ಟ್ವೀಟ್ – ಸಂತಾಪ
ಸಿಎಂ ಬದಲಾವಣೆ ಎಂದು ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ನ ಅತಿದೊಡ್ಡ ಷಡ್ಯಂತ್ರ. ಸಿದ್ದರಾಮಯ್ಯ ಡಿಕೆಶಿ ನಡುವೆ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ವಾಗ್ದಾಳಿ ನಡೆಸಿದರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ