ಸಿದ್ದುಗೆ ನಾಗರಿಕತೆ, ಸಂಸ್ಕೃತಿ ಇಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

Team Newsnap
1 Min Read

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ.ಆತನಿಗೆ ನಾಗರಿಕತೆ, ಸಂಸ್ಕೃತಿ ಎರಡೂ ಇಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಇಂದಿಲ್ಲಿ
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಸಾದ್ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು
ಆಕ್ರೋಶ ಹೊರ ಹಾಕಿದರು.

ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶ್ರೀನಿವಾಸ​ ಪ್ರಸಾದ್, ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು? ಎಂದು ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿ ಸ್ಥಾನ ಹೋದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಎಂದು ಪ್ರಸಾದ್‌ ಹೇಳಿದರು.

Share This Article
Leave a comment