ಮಂಡ್ಯ ಜಿಲ್ಲೆಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸದಿರುವವರಿಗೆ ದಂಡ ವಿಧಿಸುವ ಬದಲು ಸವಾರರಿಗೆ ಹೆಲ್ಮೆಟ್ ನೀಡುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ರಸ್ತೆ, ಎಸ್.ಡಿ. ಜಯರಾಂ ವೃತ್ತ, ಮಹಾವೀರ ವೃತ್ತ, ಜೆಸಿ ವೃತ್ತ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಅಂಬೇಡ್ಕರ್ ವೃತ್ತ, ಡಾ. ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ಪೊಲೀಸರು ತಪಾಸಣೆಗೆ ನಿಂತಿದ್ದಾರೆ.
ಈ ವೃತ್ತಗಳ ಮೂಲಕ ಹಾದು ಹೋಗುವ ದ್ವಿಚಕ್ರ ವಾಹನ ಸವಾರರು ಯಾರು ಹೆಲ್ಮೆಟ್ ಹಾಕಿಲ್ಲವೋ ಅಂತಹವರನ್ನು ತಡೆದು ದಂಡ ಕಟ್ಟುವ ಬದಲು ಹೆಲ್ಮೆಟ್ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸಿ ಸ್ಥಳದಲ್ಲೇ ಹೆಲ್ಮೆಟ್ ನೀಡುತ್ತಿದ್ದಾರೆ.
ಈ ಹಿಂದೆ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡಿದಲ್ಲಿ ವಾಹನ ಸವಾರರಿಗೆ ದಂಡ ಬೀಳುತ್ತಿತ್ತು. ಆದರೆ ಇದೀಗ ದಂಡದ ಬದಲು ಸ್ಥಳದಲ್ಲೇ ಹೆಲ್ಮೆಟ್ ಖರೀದಿಸಿ ಅದನ್ನ ಧರಿಸಿಕೊಂಡು ವಾಹನ ಚಾಲನೆ ಮಾಡುವಂತೆ ಮಾಡುತ್ತಿದ್ದಾರೆ.
ಹೆಲ್ಮೆಟ್ ಮನೆಯಲ್ಲಿದ್ದರೆ 500 ರು ದಂಡ !
ಹೆಲ್ಮೆಟ್ ಮನೆಯಲ್ಲಿದೆ ಎಂದು ಹೇಳಿ ತೆಗೆದುಕೊಳ್ಳದವರಿಗೆ 500 ರೂಪಾಯಿ ದಂಡ ವಿಧಿಸುತ್ತಿದ್ದಾರೆ. ಹೆಲ್ಮೆಟ್ ಇಲ್ಲದವರಿಗೆ ಹೆಲ್ಮೆಟ್ ನೀಡುತ್ತಿದ್ದಾರೆ, ಅಲ್ಲದೆ ಮಾಸ್ಕ್ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಘಟನೆಯಲ್ಲಿ ಯುವಕ ಮೃತಪಟ್ಟು ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಪೊಲೀಸರ ಮೇಲೆ ಮುಗಿಬಿದ್ದು ಹಿಗ್ಗಾಮುಗ್ಗಾ ಥಳಿಸಿದ್ದರು. ಇದರಿಂದ ಎಚ್ಚೆತ್ತ ಮಂಡ್ಯ ಪೊಲೀಸರು ದಂಡದ ಬದಲು ಸ್ಥಳದಲ್ಲೇ ಹೆಲ್ಮೆಟ್ ಕೊಡಿಸಿ ಎಚ್ಚರಿಕೆ ನೀಡುತ್ತಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment