January 28, 2026

Newsnap Kannada

The World at your finger tips!

madhu bangarappa 1

ಈ ವರ್ಷ SSLC ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Spread the love

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್‌ ಮಾರ್ಕ್ಸ್‌ (ಕೃಪಾಂಕ) ನೀಡುವುದಿಲ್ಲ. ಆದರೆ, 3 ಪರೀಕ್ಷೆಗಳ ಆಯ್ಕೆ ಅವಕಾಶವನ್ನು ಮುಂದುವರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸಂದರ್ಭದಷ್ಟರಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದ ಕಾರಣದಿಂದಾಗಿ ಆ ಕಾಲದ ಸರಕಾರವು ಗ್ರೇಸ್‌ ಮಾರ್ಕ್ಸ್‌ ನೀಡಲು ತೀರ್ಮಾನಿಸಿದ್ದುದನ್ನು ಸ್ಮರಿಸಿದರು. ಕಳೆದ ವರ್ಷದಲ್ಲಿ ಕೆಲವು ತೊಂದರೆಗಳು ಎದುರಾದವು, ಮತ್ತು ಕಟ್ಟುನಿಟ್ಟಿನ ಪರೀಕ್ಷೆಗಳ ಕಾರಣದಿಂದ ಶೇ.10ರಷ್ಟು ಗ್ರೇಸ್‌ ಮಾರ್ಕ್ಸ್‌ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. “ಅವರು ಸ್ವಲ್ಪ ಕೋಪಗೊಂಡಿದ್ದರು,” ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ:

“ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ,” ಎಂದು ಅವರು ಹೇಳಿದರು. “ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನ ಮಾಡಿದ್ದೇವೆ. ಈ ಕ್ರಮದಿಂದ ಫಲಿತಾಂಶದ ಪ್ರಮಾಣ ಕುಸಿಯಬಹುದು, ಆದರೆ ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಬರಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ. ಯಾವ ವಿದ್ಯಾರ್ಥಿಯೂ ಹಿಂದೆ ಬೀಳಬಾರದು, ಆದರೆ ಏನೂ ಕಲಿಯದೇ ಉತ್ತೀರ್ಣರಾಗಲು ಸಹ ಅವಕಾಶ ನೀಡಬಾರದು. ಈ ಕಾರಣದಿಂದ ಗ್ರೇಸ್‌ ಮಾರ್ಕ್ಸ್‌ ನೀಡುವುದಿಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚೇಂಜ್‌ ಫಾರ್‌ ಗುಣಮಟ್ಟದ ಶಿಕ್ಷಣ:

“ಮಂತ್ರ ಫಾರ್‌ ಚೇಂಜ್‌” ಎಂಬ ಸಂಸ್ಥೆಯು 10ನೇ ತರಗತಿ ಫಲಿತಾಂಶವನ್ನು ಹೆಚ್ಚಿಸುವ ಬಗ್ಗೆ ಕಾರ್ಯ ಮಾಡುತ್ತಿದೆ. ಎಲ್‌.ಕೆ.ಜಿ. ಮತ್ತು ಯು.ಕೆ.ಜಿ. ವಿದ್ಯಾರ್ಥಿಗಳಿಗೆ “ಚಿಲಿಪಿಲಿ” ಕಾರ್ಯಕ್ರಮದ ಮೂಲಕ ಮೂಲ ಗಣಿತದ ಪ್ರಾಯೋಗಿಕ ಪಾಠ ನೀಡಲಾಗುತ್ತಿದೆ. 46 ಸಾವಿರ ಶಾಲೆಗಳಿಗೆ ನೀರು ಮತ್ತು ವಿದ್ಯುತ್‌ ಉಚಿತವಾಗಿ ಒದಗಿಸಲಾಗುತ್ತಿದೆ.

ತಂತ್ರಜ್ಞಾನವು ಉಚಿತ ವಿದ್ಯುತ್‌ನಿಂದ ಸ್ವಯಂಚಾಲಿತವಾಗಿ ಶಾಲೆಗಳಲ್ಲಿ ಕಾರ್ಯಗತವಾಗಲಿದೆ ಎಂದು ಹೇಳಿದ್ದಾರೆ. ಅಜೀಂ ಪ್ರೇಮ್‌ಜೀ ಅವರು ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು 1,591 ಕೋಟಿ ರೂಪಾಯಿಗಳ ನೆರವು ನೀಡಿದ್ದಾರೆ. CSR (ಕಂಪನಿ ಸೊಷಿಯಲ್ ರೆಸ್ಪಾನ್ಸಿಬಿಲಿಟಿ) ನಿಧಿಯ ಮೂಲಕ ಸರಕಾರವು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಚಿವರ ಮುಖ್ಯ ಹೇಳಿಕೆಗಳು:

  •  ಗ್ರೇಸ್‌ ಮಾರ್ಕ್ಸ್‌ ನೀಡುವ ವಿಚಾರಕ್ಕೆ ಸಿಎಂ ಆಕ್ಷೇಪ
  •  ಕಟ್ಟುನಿಟ್ಟಿನ ಕ್ರಮಗಳಿಂದ ಫಲಿತಾಂಶ ಕುಸಿತ ಆಗಬಹುದು
  •  ಮಕ್ಕಳ ಕಲಿಕೆಯ ಮಟ್ಟದ ಅರಿವು ಮೂಡಿಸುವುದು ಮುಖ್ಯ
  •  ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಉನ್ನತ ಆದ್ಯತೆ

error: Content is protected !!