ನೂತನ ಸಂಪುಟ ರಚನೆಯಲ್ಲಿ ಯಾವುದೇ ಹಸ್ತಕ್ಷೇಪ ಅಥವಾ ಸಲಹೆ ನೀಡಲು ಬಯಸುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಖಡಾ ಖಂಡಿತವಾಗಿ ಹೇಳಿದ್ದಾರೆ.
ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಚಾಮರಾಜನಗರ ಜಿಲ್ಲೆಯ ಬೊಮ್ಮಲಾಪರ ಅಭಿಮಾನಿ ರವಿ ನಿವಾಸಕ್ಕೆ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ ಮುಂದಿನ ಗಣೇಶ ಹಬ್ಬದ ವೇಳೆಗೆ ರಾಜ್ಯದ ತುಂಬೆಲ್ಲಾ ಪ್ರವಾಸ ಮಾಡಲಿದ್ದೇನೆ ಎಂದಿದ್ದಾರೆ.
ಪಕ್ಷವನ್ನು ಬಲ ಪಡಿಸಿವ ನಿಟ್ಟಿನಲ್ಲಿ ಪ್ರತಿ ವಾರಕ್ಕೆ ಒಂದು ಕ್ಷೇತ್ರದಂತೆ ಪ್ರವಾಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ 135 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೈ ಕಮಾಂಡ್ಗೆ ಭರವಸೆ ನೀಡಿದ್ದೇನೆ ಎಂದು ತಿಳಿಸಿದರು.