ಇಲ್ಲಿ ಯಾರೂ ಸತ್ಯಹರಿಶ್ಚಂದ್ರ ಅಲ್ಲಾ. ನಾನು ಒಮ್ಮೆ ತಪ್ಪು ಮಾಡಿದ್ದೇನೆ ಎಂದು ಧೈರ್ಯವಾಗಿಯೇ ಹೇಳಿದ್ದೇನೆ ಅಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ
ಸದನದಲ್ಲಿ ಅನಗತ್ಯ ಚರ್ಚೆಗಳೇ ನಡೆಯುತ್ತಿದೆ. ಆದ್ದರಿಂದಲೇ ನಾನು ಸದನಕ್ಕೆ ಗೈರು ಹಾಜರಾಗಿದ್ದೇನೆ ಎಂದರು.
ಸದನದಲ್ಲಿ ಬಟ್ಟೆ, ರಾಜೀನಾಮೆ, ಚುನಾವಣೆ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಆದರೆ ರಾಜ್ಯದ ನೈಜ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಸಿ.ಡಿ ವಿಚಾರದ ಬಗ್ಗೆ ಚರ್ಚೆ ಮಾಡೋದು ಎಷ್ಟು ಸರಿ? ಎಂದು ಪ್ರಶ್ನಿಸಿದರು.
ಇದೇ ವೇಳೆ ವಿರೋಧ ಪಕ್ಷದ ನಾಯಕರೆಲ್ಲ ಶ್ರೀರಾಮಚಂದ್ರರೇ? ಎಲ್ಲರ ವಿರುದ್ಧವೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಾನು ಒಂದು ಬಾರಿ ಎಡವಿದ್ದೇನೆ. ಸಚಿವರು ತಪ್ಪು ಮಾಡಿಕೊಂಡಿದ್ದಾರೆ. ಇವರು ಯಾಕೆ ಕೋರ್ಟಿಗೆ ಹೋಗಬೇಕಾಯಿತು..? ಇವರೇ ಸಮಸ್ಯೆಗಳನ್ನು ಉದ್ಭವ ಮಾಡಿಕೊಂಡಿದ್ದಾರೆ. ಹೀಗಿರುವಾಗ ಬೇರೆಯವರ ಮೇಲೆ ಯಾಕೆ ರಾಡಿ ಎರಚುತ್ತಾರೆ. ಇಲ್ಲಿ ಯಾರೂ ಸತ್ಯಹರಿಶ್ಚಂದ್ರ ಅಲ್ಲ. ನಾನು ಧೈರ್ಯವಾಗಿಯೇ ಹೇಳಿದ್ದೇನೆ. ನಾನು ಒಮ್ಮೆ ತಪ್ಪು ಮಾಡಿದ್ದೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ