ಕೆಆರ್ಎಸ್ ಸುತ್ತಮುತ್ತಲು ಟ್ರಯಲ್ ಬ್ಲಾಸ್ಟ್ ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕರೂ ಸಹ ಗಣಿಗಾರಿಕೆಗೆ ಸುತರಾಂ ಅವಕಾಶ ನೀಡಬೇಡಿ ಎಂದು ಸಂಸದೆ ಸುಮಲತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣಿ ಸಚಿವರಿಗೆ ಪತ್ರ ಬರೆದಿದ್ದಾರೆ
ಕೆಆರ್ಎಸ್ ವ್ಯಾಪ್ತಿಯ 20 ಕಿ.ಮೀ ಗಣಿನಿಷೇಧ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡುವಂತೆ ಸಿಎಂ, ಗಣಿ ಸಚಿವರಿಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.ಇದನ್ನು ಓದಿ –ಕ್ಯಾಥೋಲಿಕರು ಇಲ್ಲ ಅಂದ್ರೆ ತಮಿಳುನಾಡು ಮತ್ತೊಂದು ಬಿಹಾರ : ಸ್ಪೀಕರ್ ವಿವಾದ ಹೇಳಿಕೆ
ಜಾರ್ಖಂಡ್ನಿಂದ ಆಗಮಿಸಿರುವ ಸಿಎಸ್ಐಆರ್ ಮತ್ತು ಸಿಐಎಂಎಫ್ಆರ್ ವಿಜ್ಞಾನಿಗಳು ಕಂಟ್ರೋಲ್ ಬಳಸಿ ಟ್ರಯಲ್ ಬ್ಲಾಸ್ಟ್ ಮಾಡುತ್ತಾರೆ. ಆ ಸಂಶೋಧನೆ ಕೇವಲ 200 ಮೀಟರ್ ವ್ಯಾಪ್ತಿಗಷ್ಟೇ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.

ಈ. ವರದಿ ಆಧರಿಸಿ ಕೆಆರ್ಎಸ್ ಸುತ್ತಮುತ್ತ ಗಣಿಗಾರಿಕೆಗೆ ಅವಕಾಶಕೊಟ್ಟರೆ ರಿಗ್, ಬೋರ್, ಸೈಲೆಂಟ್ ಬ್ಲಾಸ್ಟ್ ಮಾಡುತ್ತಾರೆ. ಈ ಹಿಂದೆಯೇ ಇಂತಹ ಗಣಿಗಾರಿಕೆಯಿಂದ 2.4 ರಿಕ್ಟರ್ ಮಾಪನದಷ್ಟು ಭೂಕಂಪನವಾಗಿತ್ತು. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಂಶೋಧನಾ ಸಂಸ್ಥೆಗಳು ಕೆಆರ್ಎಸ್ ಸುತ್ತಮುತ್ತಲ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಅಪಾಯದ ಬಗ್ಗೆ ವರದಿ ನೀಡಿವೆ. ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ.
ಕೆಆರ್ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ನಿಷೇಧದ ಪ್ರದೇಶವಾಗಿಯೆ ಇರಲಿ. ಇದೇ ನನ್ನ ಹಾಗೂ ರೈತ, ಪ್ರಗತಿಪರ ಸಂಘಟನೆಗಳ ನಿಲುವು ಪತ್ರದಲ್ಲಿ ಹೇಳಿದ್ದಾರೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು