January 28, 2026

Newsnap Kannada

The World at your finger tips!

CM , DCM , Congress

ಹೊಸ ಮದ್ಯದಂಗಡಿ ತೆರೆಯಲ್ಲ 

Spread the love

ಚಿತ್ರದುರ್ಗ: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಚಿಂತನೆ ನಡೆಸುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿದ್ದಾರೆಯೇ ಹೊರತು, ಅದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿಲ್ಲ.

ಯಾವುದೇ ಹೊಸ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಮದ್ಯದಂಗಡಿಗೆ ಹೊಸ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧ ಇದೆ.

ಹಣಕಾಸಿನ ಕೊರತೆ ಇದ್ದರೂ ಮದ್ಯದಂಗಡಿ ಹೊಸ ಲೈಸೆನ್ಸ್ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದರು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ಅಬಕಾರಿ ಸಚಿವರು ತಿಳಿಸಿದ್ದರು.

error: Content is protected !!