April 17, 2025

Newsnap Kannada

The World at your finger tips!

krishna bairegowda

ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ

Spread the love

ಬೆಂಗಳೂರು: ರಾಜ್ಯದಲ್ಲಿ ಹೊಸ ಜಿಲ್ಲೆ ಅಥವಾ ತಾಲೂಕುಗಳನ್ನು ರಚಿಸುವ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಮಂಗಳವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ, ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ್, ತಮ್ಮ ಕ್ಷೇತ್ರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಕುರಿತು ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, “ಜನಗಣತಿ ನಡೆಯುವ ಸಮಯದಲ್ಲಿ ಯಾವುದೇ ರಾಜ್ಯ ಹೊಸ ಕಂದಾಯ ಜಿಲ್ಲೆ ಘೋಷಿಸಬಾರದು ಎಂದು ಕೇಂದ್ರ ಸರ್ಕಾರದ ನಿಯಮವಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಮುಂದೆಯೂ ಹೊಸ ಜಿಲ್ಲೆ ಅಥವಾ ಹೊಸ ತಾಲೂಕು ರಚನೆ ಸಂಬಂಧ ಯಾವುದೇ ಪ್ರಸ್ತಾವನೆ ಇಲ್ಲ” ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ಭೂಕಬಳಿಕೆ ಪ್ರಕರಣ: ಸಚಿವ ಚೆಲುವರಾಯಸ್ವಾಮಿಗೆ ಬಿಗ್ ರಿಲೀಫ್

ತಾವು ಮುಂದುವರಿಯುತ್ತಾ, “ಒಂದೆರಡು ತಾಲೂಕುಗಳನ್ನು ಜಿಲ್ಲೆಗಳಾಗಿ ಪರಿಗಣಿಸುವ ಕುರಿತು ಕೆಲವೊಂದು ಬೇಡಿಕೆಗಳು ಬಂದಿವೆ. ಭವಿಷ್ಯದಲ್ಲಿ ಈ ಸಂಬಂಧ ಯಾವುದೇ ಅವಕಾಶಗಳು ಎದುರಾದರೆ, ಖಂಡಿತವಾಗಿಯೂ ಇಂಡಿ ತಾಲೂಕನ್ನು ಪರಿಗಣಿಸಲಾಗುವುದು” ಎಂದು ಭರವಸೆ ನೀಡಿದರು.

Copyright © All rights reserved Newsnap | Newsever by AF themes.
error: Content is protected !!