ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆ (1 ರಿಂದ 5) ಗಳನ್ನು ಆರಂಭಿಸುವ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಸದ್ಯ ಪ್ರಾಥಮಿಕ ಶಾಲೆ ಆರಂಭದ ಚಿಂತನೆಯೇ ಇಲ್ಲ. ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸದ್ಯ 6 ತರಗತಿ ಯಿಂದ ಪ್ರಾಯೋಗಿಕ ಪ್ರಯತ್ನ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 1ರಿಂದ 5ನೆ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯ ಅಂತಹ ಆಲೋಚನೆಗಳಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.
2913 ಗ್ರಾಮ ಪಂಚಾಯತ್ ಗಳಲ್ಲಿ ಕೊವಿಡ್ ಪಾಸಿಟಿವಿಟಿ ಶೂನ್ಯವಿದೆ. 6472 ಮಕ್ಕಳ ಕೊವಿಡ್ ಸ್ಯಾಂಪಲ್ಗಳಲ್ಲಿ 12 ಮಕ್ಕಳಲ್ಲಿ ಮಾತ್ರ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದರು.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ