ಕೊರೊನಾ ಪಾದಯಾತ್ರೆಯಲ್ಲಿ ಒಬ್ಬ ಪೊಲೀಸ್ ಆದರೂ ಕರ್ತವ್ಯ ನಿರ್ವಹಿಸಿದ್ದರಾ, ಎಲ್ಲಾ ಕಾರ್ಯವನ್ನು ನಮ್ಮ ಕಾರ್ಯಕರ್ತರೇ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು
ಮೇಕೆದಾಟು ಪಾದಯಾತ್ರೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಕೊರೊನಾ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿಅವರು, ಪೊಲೀಸರು ಒಂದೇ ಒಂದು ಬಸ್ಸು ನಿಯಂತ್ರಿಸುವ ಕೆಲಸವನ್ನಾದರೂ ಮಾಡಿದ್ದಾರಾ? ನಮ್ಮ ಕಾರ್ಯಕರ್ತರೇ ಜನರನ್ನು ನಿಯಂತ್ರಿಸಿದರು. ಊಟದ ಬಳಿಯೂ ನಮ್ಮವರೇ ಎಲ್ಲಾ ನಿಯಂತ್ರಿಸಿದ್ದಾರೆ ಎಂದು ವಾಗ್ದಾಳಿ ಮಾಡಿದರು
ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ಕಾರ್ಯಕ್ರಮಕ್ಕೆ ಯಾಕೆ ಕೇಸು ಹಾಕಿಲ್ಲ? ಮೊದಲು ಅಲ್ಲಿ ಕೇಸು ಹಾಕಲಿ ಎಂದ ಅವರು ನಿನ್ನ ವೃತ್ತಿಗೆ, ಬಟ್ಟೆಗೆ ಗೌರವ ಇದ್ದರೆ ಬಿಜೆಪಿ ಮೇಲೂ ಕೇಸು ಹಾಕಿ ಎಂದು ಡಿಜಿಗೆ ಹೇಳುತ್ತೇನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಕೊರೊನಾ ಕಡಿಮೆ ಆದ ನಂತರ ಮತ್ತೆ ಪಾದಯಾತ್ರೆ ನಡೆಸುವ ಬಗ್ಗೆ ಸಂಕಲ್ಪದ ಜೊತೆಗೆ ಪ್ರತಿಜ್ಞೆಯೂ ಆಗಿದೆ. ಕೊರೊನಾ ನಿಯಮ ಸಡಿಲವಾಗುತ್ತಿದ್ದಂತೆ ಪಾದಯಾತ್ರೆ ಮುಂದುವರಿಸುತ್ತೇವೆ. 10 ಜನನೋ, 100 ಜನನೋ ಸರ್ಕಾರ ಎಷ್ಟು ಹೇಳುತ್ತಾರೋ ಅಷ್ಟು ನಡೆಯುತ್ತೇವೆ ಎಂದರು.
ಬಿಜೆಪಿ ಅವರು ಏನೇನು ಟಾರ್ಗೆಟ್ ಮಾಡುತ್ತಾರೋ ಮಾಡಲಿ. ಪಾದಯಾತ್ರೆ ವಿಚಾರದಲ್ಲಿ ಎಲ್ಲಾ ಸೇರಿ ಒಂದು ಕೇಸು ಹಾಕಬಹುದಿತ್ತು. ಆದರೆ ದಿನ ಒಂದೊಂದು ಕೇಸು ಹಾಕಿದ್ದಾರೆ ಎಂದು ಕಿಡಿಕಾರಿದರು.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment