Trending

ಸಿಎಂ ಬೊಮ್ಮಾಯಿಯೊಂದಿಗೆ ಅಂತರಕಾಯ್ದುಕೊಂಡಿಲ್ಲ: ಶೆಟ್ಟರ್ ವಿವರಣೆ

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳದ ಮೇಲೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಸಂಪುಟದಲ್ಲಿದ್ದ ಹಿರಿಯ ಸಚಿವ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ವಲ್ಪ ಅಸಮಧಾನಹೊಂದಿದ್ದರು. ಕೆಲವೊಮ್ಮೆ ಪರೋಕ್ಷವಾಗಿ ಅವರೇ ಇದನ್ನು ಹೊರಹಾಕಿದ್ದು ಇದೆ.


ಹೀಗಿರಬೇಕಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಭಾಗವಹಿಸುವ ಸಮಾರಂಭದಲ್ಲಿ ಶೆಟ್ಟರ್ ಇಲ್ಲದಿದ್ದರೆ ಅದಕ್ಕೆ ಬೇರೆ ವ್ಯಾಖ್ಯಾನಗಳೇ ಬರುತ್ತವೆ ಎಂಬುದಕ್ಕೆ ತಾಜಾ ಉದಾಹರಣೆಯೆಂದರೆ ಸೋಮವಾರ ಆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಇರಲಿಲ್ಲ. ಇದು ವಿಪರೀತ ಅರ್ಥ ಕಲ್ಪಿಸಬಾರದೆಂಬ ಉದ್ದೇಶದಿಂದ ಶೆಟ್ಟರ್ ಎಚ್ಚೆತ್ತುಕೊಂಡಂತೆ ಕಾಣುತ್ತೆ.


ಹುಬ್ಬಳ್ಳಿಯಲ್ಲಿ ಮಂಗಳವಾರ ವರದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೊಂದಿಗೆ ಯಾವುದೇ ರೀತಿಯ ಮುನಿಸು ಇಲ್ಲ ಎಂದು ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ನಾನು ಇಲ್ಲದಿದ್ದಕ್ಕೆ ಬೇರೆ ರೀತಿ ಭಾವಿಸಬಾರದೆಂಬ ಅರ್ಥದಲ್ಲಿ ಹೇಳಿದರು. ಅಲ್ಲದೆ ನಾನು ಭಾಗವಹಿಸಲೇಬೇಕಾದ ಅನಿವಾರ್ಯತೆ ಇರಲಿಲ್ಲ. ಬೊಮ್ಮಾಯಿಯೊಂದಿಗೆ ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ ಎಂದು ತಿಳಿಸಿದರು.


ಇದಕ್ಕೆ ಉದಾಹರಣೆಯಾಗಿ, ಬೆಳಗಾವಿಯಲ್ಲಿ ಇತ್ತೀಚಿಗೆ ನಡೆದ ದಿ. ಸುರೇಶ್ ಅಂಗಡಿ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಬೊಮ್ಮಾಯಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದೆ. ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾಗ ಒಟ್ಟಿಗೆ ಇದ್ದೆವು ಎಂಬುದಾಗಿ ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024