February 19, 2026

Newsnap Kannada

The World at your finger tips!

cd

ಭ್ರಷ್ಟಾಚಾರ ಮಾತ್ರವಲ್ಲ, ಕಣ್ಣಿಂದ ನೋಡಲೂ ಸಹ ಅಸಾಧ್ಯವಾದ ಸಿಡಿಗಳಿವೆ – ಯತ್ನಾಳ್ ಹೊಸ ಬಾಂಬ್

Spread the love

ಸಿಡಿ ಬಾಂಬ್ ಬಹಿರಂಗ ಮಾಡುವ ವಿಚಾರ ಇಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಆರೋಪದ ಸುರಿಮಳೆ ಗರೆದಿದ್ದಾರೆ.

ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ನವರ ಭ್ರಷ್ಟಾಚಾರ ಸಿಡಿ ಮಾತ್ರವಲ್ಲ, ಕಣ್ಣಿನಿಂದ ನೋಡಲು ಆಗದಂತಹ ಸಿಡಿಗಳೂ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

yathnal
ಸಿಡಿ ತೆಗೆದುಕೊಂಡು ನನ್ನ ಬಳಿ ಬಂದಿದ್ದರು :

ನನ್ನ ಬಳಿ ಬಂದಿದ್ದ 3 ಶಾಸಕರ ಬಳಿ ಆ ಸಿಡಿಗಳಿವೆ. ಆದರೆ ನಾನು ಅಂಥಹ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವಂತವನಲ್ಲ. ಹಾಗೆ ಮಾಡುವವನಾಗಿದ್ದರೆ ಇಂದು ನಾನು ಡಿಸಿಎಂ ಆಗುತ್ತಿದ್ದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕರ ಬಳಿಯೂ ಸಿಡಿ ಇದೆ :

ಕೇವಲ ಬಿಜೆಪಿ ಶಾಸಕರ ಬಳಿ ಮಾತ್ರವಲ್ಲ ಆ ಸಿಡಿ ವಿಪಕ್ಷ ಕಾಂಗ್ರೆಸ್ ನಾಯಕರ ಬಳಿಯೂ ಇದೆ. ಡಿಕೆಶಿ, ಜಮೀರ್ ಅಹ್ಮದ್, ಜಾರ್ಜ್ ಬಳಿಯೂ ಆ ಸಿಡಿ ಇದೆ. ಸಿಡಿ ಇಟ್ಟುಕೊಂಡು ಕಾಂಗ್ರೆಸ್ ನವರು ಸಿಎಂ ಅವರಿಂದ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ. ನಾವು ಅನುದಾನ ಕೇಳಿದರೆ ವಿಷ ಕುಡಿಯಲೂ ಹಣವಿಲ್ಲ ಎನ್ನುತ್ತಾರೆ. ಆದರೆ ಕಾಂಗ್ರೆಸ್ ನಾಯಕರಿಗೆ ಅನುದಾನ ಹೇಗೆ ನೀಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರಿಗೆ ನೈತಿಕತೆ ಎಂಬುದಿದ್ದರೆ ಆ ಸಿಡಿಗಳನ್ನು ಬಿಡುಗಡೆ ಮಾಡಲಿ ಎಂದು ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ.

error: Content is protected !!