ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನಿಂಗ್ ಕ್ಯಾರೇ ಎನ್ನದ ಶಾಸಕ ಜಮೀರ್ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಪದೇ ಪದೇ ಪ್ರಸ್ತಾಪ ಮಾಡುತ್ತಲೇ ಇದ್ದಾರೆ. ಹೀಗಾಗಿ ಈ ಕುರಿತಂತೆ ಚಕಾರ್ ಎತ್ತದಂತೆ ಜಮೀರ್ಗೆ ಆಲ್ ಇಂಡಿಯಾ ನ್ಯಾಷನಲ್ ಕಾಂಗ್ರೆಸ್ (AICC )ನಿಂದಲೇ ನೋಟಿಸ್ ಬಂದಿದೆ.
ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೋಟಿಸ್ ನೀಡಿ ಮತ್ತೊಮ್ಮೆ ಪಕ್ಷದ ಶಿಸ್ತು ಉಲ್ಲಂಘಿಸಬಾರದು ಎಂದು ಎಚ್ಚರಿಸಿದ್ದಾರೆ.
ಹೈಕಮಾಂಡ್ ನಿರ್ಧಾರ ಮಾಡುವ ತನಕ ಮುಂದಿನ ಸಿಎಂ ಯಾರು ಎಂಬ ಬಗ್ಗೆ ಯಾವುದೇ ಕಾರಣಕ್ಕೂ ಹೇಳಿಕೆ ಕೊಡಬಾರದು. ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿದರೆ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಾರ್ನಿಂಗ್ ನೀಡಿದ್ದಾರೆ.