ಅಂತಾರಾಷ್ಟ್ರೀಯ ಹುಲಿದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್.ಟಿ.ಸಿ.ಎ.) ಮಾರ್ಗಸೂಚಿಯ ಪ್ರಕಾರ ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ಹುಲಿ ಗಣತಿ ಮಾಡಲಾಗುತ್ತದೆ.ಆನೆ, ಮಾಂಸಹಾರಿ ಮತ್ತು ಸಸ್ಯಹಾರಿ ಪ್ರಾಣಿಗಳ ಗಣತಿಯನ್ನೂ ದೇಶಾದ್ಯಂತ ನಡೆಸಲಾಗುತ್ತದೆ ಎಂದರು.
ಪಶ್ಚಿಮ ಘಟ್ಟದ ಹೆಚ್ಚಿನ ಭಾಗ ಹೊಂದಿರುವ ಕರ್ನಾಟಕವು ಹುಲಿಗಳ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ
,2021-22ರ ಅವಧಿಯಲ್ಲಿ ಹುಲಿ ಗಣತಿಯನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಿದ್ದು, ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಭದ್ರಾ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹಾಗೂ ಕಾಳಿ ಕಾನನ ಸೇರಿದಂತೆ 37 ವನ್ಯಜೀವಿ ಧಾಮಗಳಲ್ಲಿ ಒಟ್ಟು 37 ವಿಭಾಗದಲ್ಲಿ ನಡೆಸಲಾಗಿದೆ. ಈ ಗಣತಿಗೆ ಕ್ಯಾಮರಾ ಟ್ರ್ಯಾಪ್ ಮತ್ತು ಲೈನ್ ಟ್ರನ್ಸ್ಯಾಕ್ಟ್ ವಿಧಾನ ಬಳಸಲಾಗಿದೆ ಎಂದು ವಿವರಿಸಿದರು.
ರಾಜ್ಯದ ಎಲ್ಲ ಸಂರಕ್ಷಿತ ಅರಣ್ಯಗಳಲ್ಲಿ ಅಳವಡಿಸಲಾಗಿದ್ದ 5399 ಕ್ಯಾಮರಾ ಟ್ರ್ಯಾಪ್ ನಲ್ಲಿ 66 ಲಕ್ಷಕ್ಕೂ ಹಚ್ಚು ವನ್ಯ ಜೀವಿಗಳ ಛಾಯಾಚಿತ್ರ ಕ್ರೋಡೀಕರಣವಾಗದ್ದು, ಆಧುನಿಕ ತಂತ್ರಜ್ಞಾನ ಬಳಸಿ ಹುಲಿಗಳ ಚಲನವಲನ, ಪ್ರಾದೇಶಿಕ ಪರಿಮಿತಿ ಹುಲಿಗಳ ಮೈಮೇಲಿನ ಪಟ್ಟೆಗಳ ಆಧಾರದ ಮೇಲೆ ಹುಲಿಗಳ ಸಂಖ್ಯೆಯನ್ನು ಲೆಕ್ಕಹಾಕಲಾಗಿದೆ ಎಂದು ವಿವರ ನೀಡಿದರು.
2018ರಲ್ಲಿ ನಡೆದಿದ್ದ ಅಖಿಲ ಭಾರತ ಹುಲಿ ಗಣತಿಯ ಪ್ರಕಾರ ಕರ್ನಾಟಕದಲ್ಲಿ ನಡೆದ ಕ್ಯಾಮರಾ ಟ್ರ್ಯಾಪ್ ನಲ್ಲಿ 404 ಹುಲಿಗಳು ಪತ್ತೆಯಾಗಿದ್ದವು ಇದನ್ನು ವನ್ಯಜೀವಿ ಸಂಖ್ಯಾಶಾಸ್ತ್ರದ ಪ್ರಕಾರ ವಿಶ್ಲೇಷಿಸಿದಾಗ ರಾಜ್ಯದಲ್ಲಿ 475ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿತ್ತು. 2022ರಲ್ಲಿ ರಾಜ್ಯದಲ್ಲಿ 435 ಹುಲಿಗಳು ಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚು ಆಗಬಹುದು ಎಂದು ವಿಶ್ಲೇಷಿಸಬಹುದು ಎಂದರು.
ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 612, ಭದ್ರಾದಲ್ಲಿ 330, ಬಿಆರ್.ಟಿ.ಯಲ್ಲಿ 288, ಕಾಳಿಯಲ್ಲಿ 448, ನಾಗರಹೊಳೆಯಲ್ಲಿ 502 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು. ಇದರಲ್ಲಿ 376 ಅನನ್ಯ (ವಿಶಿಷ್ಟ) ಹುಲಿಗಳು ಪತ್ತೆಯಾಗಿವೆ ಎಂದು ವಿವರ ನೀಡಿದರು.ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ
ಇದರಲ್ಲದೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ 80, ಬೆಳಗಾವಿ ವಿಭಾಗದಲ್ಲಿ 119, ಭದ್ರಾವತಿ ವಿಭಾಗದಲ್ಲಿ 121, ಕಾವೇರಿ ವನ್ಯಜೀವಿ ಧಾಮದಲ್ಲಿ 473, ಚಿಕ್ಕಮಗಳೂರು ವನ್ಯಜೀವಿ ಅರಣ್ಯದಲ್ಲಿ 41, ಹಳಿಯಾಳದಲ್ಲಿ 106, ಕಾರವಾರ ವಿಭಾಗದಲ್ಲಿ 135, ಕೊಪ್ಪ ವನ್ಯಜೀವಿಧಾಮದಲ್ಲಿ 50, ಕುದುರೇಮುಖ ವಿಭಾಗದಲ್ಲಿ 173, ಮಡಿಕೇರಿ (ಬ್ರಹ್ಮಗಿರಿ, ಪುಷ್ಪಗಿರಿ ಮತ್ತು ತಲಕಾವೇರಿ) ವಿಭಾಗದಲ್ಲಿ 175, ಮಲೆ ಮಹದೇಶ್ವರ ಬೆಟ್ಟದಲ್ಲಿ 432, ಮೈಸೂರು ವಿಭಾಗದಲ್ಲಿ 36, ಶಿವಮೊಗ್ಗ ವನ್ಯಜೀವಿ ಧಾಮದಲ್ಲಿ 182, ಶಿರಸಿ ವಿಭಾಗದಲ್ಲಿ 107, ವಿರಾಜಪೇಟೆ ವಿಭಾಗದಲ್ಲಿ 111, ಯಲ್ಲಾಪುರ ವಿಭಾಗದಲ್ಲಿ 94 ಸೇರಿ ರಾಜ್ಯದಲ್ಲಿ ಒಟ್ಟಾರೆ 4786 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು, ಈ ಎಲ್ಲ ಕ್ಯಾಮರಾಗಳಲ್ಲಿ 1 ಲಕ್ಷ 61ಸಾವಿರದ 53 ರಾತ್ರಿಯ ವೇಳೆ ಸಂಚಾರದ ಚಿತ್ರೀಕರಣ ಪ್ರಯತ್ನ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment