ಬಾಗಲಕೋಟೆ ತಾಲೂಕಿನ ಕೇರೂರು ಪಟ್ಟಣದಲ್ಲಿ ಎರಡು ಕೋಮಿನ ಯುವಕರ ನಡುವೆ ನಡೆದ ಘರ್ಷಣೆಯಲ್ಲಿ ಮೂವರಿಗೆ ಚೂರಿಯಿಂದ ಇರಿದು ರಾಡ್ ನಿಂದ ಹೊಡೆದು ಗಾಯಗೊಳಿಸಿದ ಘಟನೆ ಕಳೆದ ರಾತ್ರಿ ಜರುಗಿದೆ
ಈ ಘಟನೆಯಲ್ಲಿ ಅರುಣ್, ಲಕ್ಷ್ಮಣ್, ಯಮನೂರು ಎಂಬುವರಿಗೆ ಗಾಯಗಳಾಗಿವೆ. ನೂಪುರ್ ಶರ್ಮಾ ಪರ-ವಿರೋಧ ವಿಚಾರವಾಗಿಯೇ ಬಾಗಲಕೋಟೆಯ ಕೇರೂರಿನಲ್ಲಿ ಗುಂಪು ಘರ್ಷಣೆ ನಡೆದಿದೆ.ಇದನ್ನು ಓದಿ –ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ಅನ್ಯಕೋಮಿನ ವ್ಯಕ್ತಿಯೊಬ್ಬರು ನೂಪುರ್ ವಿರುದ್ಧ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಶುರುವಾದ ಜಗಳ ಕೋಮು ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ. ಅರುಣ್ ಕಟ್ಟಿಮನಿ ಸೇರಿ ಆತನ ಸ್ನೇಹಿತರು ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಅರುಣ್ ಬೆನ್ನಿಗೆ ಚೂರಿ ಹಾಕಿದ್ದಾರೆ. ತಕ್ಷಣವೇ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಕೆರೂರು ಪಟ್ಟಣದ ಬಸ್ ನಿಲ್ದಾಣದ ಮುಂದಿನ ಎರಡು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿ, ಐದು ಬೈಕ್ಗಳನ್ನು ಜಖಂಗೊಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ತರಕಾರಿ ಅಂಗಡಿಗಳನ್ನು ಧ್ವಂಸ ಮಾಡಿದರು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಕೆರೂರು ಪಟ್ಟಣಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇಂದು ರಾತ್ರಿ 8 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಂಗಡಿ – ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ನಾಳೆವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ