Trending

ಬಾಲ್ಯದಲ್ಲಿ ರಾಮಾಯಣ, ಮಹಾ ಭಾರತದ ಕಥೆ ಕೇಳಿ ಬೆಳೆದ ಒಬಾಮಾ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಇಂಡೋನೇಷ್ಯಾದಲ್ಲಿ ಬಾಲ್ಯ ಕಳೆಯುವಾಗ, ಹಿಂದೂ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತದ ಕಥೆಗಳನ್ನು ಆಲಿಸುತ್ತಿದ್ದರಂತೆ. ಹೀಗಾಗಿ ಅವರಿಗೆ ಭಾರತದ ಬಗ್ಗೆ ವಿಶೇಷವಾದ ಪ್ರೀತಿ, ಗೌರವ..!

ತಮ್ಮ ಇತ್ತೀಚೆಗಿನ ‘ಎ ಪ್ರಾಮಿಸ್ಡ್‌ ಲ್ಯಾಂಡ್‌‘ ಕೃತಿಯಲ್ಲಿ ಭಾರತದ ಬಗೆಗಿರುವ ತಮ್ಮ ಪ್ರೀತಿಯನ್ನು ಹೀಗೆ ವ್ಯಕ್ತಪಡಿಸಿದ್ದಾರೆ.

‘ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, ಏಳನೂರಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯದಿಂದಲೇ ಎಲ್ಲರನ್ನೂ ಆಕರ್ಷಿಸುತ್ತದೆ‘ ಎಂದು ಅವರು ಕೃತಿಯಲ್ಲಿ ಬರೆದಿದ್ದಾರೆ.

‘ಅಮೆರಿಕದ ಅಧ್ಯಕ್ಷನಾಗುವ ಮುನ್ನ, ನಾನು ಭಾರತಕ್ಕೆ ಭೇಟಿ ನೀಡಿರಲಿಲ್ಲ. ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು‘ ಎಂದು ಒಬಾಮಾ ಹೇಳಿಕೊಂಡಿದ್ದಾರೆ.

‘ಬಾಲ್ಯದಲ್ಲಿ ರಾಮಾಯಣ, ಮಹಾಭಾರತದ ಕಥೆಗಳನ್ನು ಕೇಳಿದ್ದರಿಂದಲೋ ಅಥವಾ ನನಗೆ ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳಾದ ದಾಲ್ ಮತ್ತು ಕೀಮಾ ತಿನಿಸುಗಳನ್ನು ತಯಾರಿಕೆ ಕಲಿಸುವ ಜತೆಗೆ, ಬಾಲಿವುಡ್ ಸಿನಿಮಾ ನೋಡುವಂತೆ ಮಾಡಿದ್ದ ಪಾಕಿಸ್ತಾನ ಮತ್ತು ಭಾರತದ ಸ್ನೇಹಬಳಗದಿಂದಲೋ ಏನೊ, ಭಾರತದ ಬಗ್ಗೆ ನನ್ನಲ್ಲಿ ವಿಶೇಷ ಪ್ರೀತಿ ಮೂಡಿದೆ‘ ಎಂದು ಒಬಾಮಾ ಬರೆದುಕೊಂಡಿದ್ದಾರೆ.

ಒಬಾಮಾ ಅವರು ‘ಎ ಪ್ರಾಮಿಸ್ಡ್‌ ಲ್ಯಾಂಡ್‌‘ ಕೃತಿಯಲ್ಲಿ 2008ರ ಅಧ್ಯಕ್ಷೀಯ ಚುನಾವಣಾ ಪ್ರಚಾರದಿಂದ ಅಧ್ಯಕ್ಷರ ಅವಧಿ ಪೂರ್ಣಗೊಳ್ಳುವವರೆಗಿನ ಘಟನೆಗಳನ್ನು ಬರೆದಿದ್ದಾರೆ. ಜತೆಗೆ, ಪಾಕಿಸ್ತಾನದ ಅಬ್ಬೋಟ್ಟಾಬಾದ್‌ನಲ್ಲಿ ಅಲ್‌ಖೈದಾ ಮುಖಂಡ ಒಸಾಮಾಬಿನ್ ಲಾಡೆನ್‌ನ್ನು ಹತ್ಯೆ ಮಾಡಿದಂತಹ ಘಟನೆಗಳನ್ನೂ ಉಲ್ಲೇಖಿಸಿದ್ದಾರೆ. ಎರಡು ಸಂಪುಟಗಳಲ್ಲಿ ಸಿದ್ಧವಾಗುತ್ತಿ ರುವ ಈ ಕೃತಿಯ ಮೊದಲ ಭಾಗ, ವಿಶ್ವದಾದ್ಯಂತ ಪುಸ್ತಕ ಮಳಿಗೆಗಳಲ್ಲಿ ಖರೀದಿಗೆ ಲಭ್ಯವಾಗುತ್ತಿದೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024