ಅಕ್ಟೋಬರ್ನಿಂದ ಶೈಕ್ಷಣಿಕ ವರ್ಷ ಪಾಲಿಸುವಂತೆ ವಿವಿ ಕುಲಪತಿಗಳಿಗೆ ಸೂಚನೆ
ಬರುವ ಅಕ್ಟೋಬರ್ನಿಂದ 2021-22 ನೇ ವಿಶ್ವವಿದ್ಯಾಲಯ ಗಳ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಎಲ್ಲಾ ವಿವಿ ಕುಲಪತಿಗಳಿಗೆ ಶೈಕ್ಷಣಿಕ ವರ್ಷ ಪಾಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಮೊದಲ ವರ್ಷದ ಪದವಿ ಕೋರ್ಸ್ಗಳಿಗೆ ಅಕ್ಟೋಬರ್ ಮೊದಲ ವಾರದಲ್ಲಿ ದಾಖಲಾತಿ ಮಾಡಲು ಸೂಚನೆ ನೀಡಲಾಗಿದೆ. ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ನಡೆಸಿತ್ತು. ಸದ್ಯ ಈ ವರ್ಷ ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಪ್ರಕ್ರಿಯೆಯನ್ನ ಸರ್ಕಾರ ಕೈಬಿಟ್ಟಿದೆ. ನೇರವಾಗಿ ಬಿಎಸ್ಸಿ ಪದವಿಗೆ ದಾಖಲು ಪಡೆಯಬಹುದು.
ಪಿಯುಸಿ ಪಾಸಾದವರೆಲ್ಲ ಸಿಇಟಿ ಪರೀಕ್ಷೆ ಬರೆಯಬಹುದು. ಪ್ರಸಕ್ತ ವರ್ಷ ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯುವ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ