ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಮೂರು ರೈಲುಗಳ ಅಪಘಾತದಲ್ಲಿ 275 ಮಂದಿ ಸಾವನ್ನಪ್ಪಿ, 600ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಘಟನೆಯ ಕುರಿತಂತೆ ಸಮಗ್ರ ತನಿಖೆ ನಡೆಸುವ ಸಂಬಂಧ ರೈಲ್ವೆ ಮಂಡಳಿಯಿಂದ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದೆ.
ಬಾಲಸೋರ್ ಜಿಲ್ಲೆಯ ಬಹನಾಗದ ರೈಲ್ವೆ ಅಪಘಾತ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಒಡಿಶಾ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.
ಒಡಿಶಾ ರೈಲು ಅಪಘಾತ ಪ್ರಕರಣ ಕುರಿತಂತೆ ನಾಳೆ, ನಾಡಿದ್ದು ರೈಲ್ವೆ ಸುರಕ್ಷತಾ ಆಯುಕ್ತರಿಂದ ವಿಚಾರಣೆ ಕೂಡ ನಡೆಯಲಿದೆ.
12841 ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು 12864 ಎಸ್ಎಂವಿಟಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಹಳಿ ತಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರು ವಿವಿಧ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ವಿಚಾರಣೆ ಮಾಡಲಿದ್ದಾರೆ.ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಈ ಮೂಲಕ ರೈಲು ಅಪಘಾತಕ್ಕೆ ಕಾರಣರಾದವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ