Main News

ಕನಾ೯ಟಕಕ್ಕೂ ಕಾಲಿಟ್ಟ ಒಮಿಕ್ರಾನ್ – ಇಬ್ಬರಿಗೆ ಸೋಂಕು ಪತ್ತೆ: ಆತಂಕ ಶುರು

ಕರ್ನಾಟಕದಲ್ಲಿ ಇಬ್ಬರಲ್ಲಿ ಒಮಿಕ್ರಾನ್​ ಕೊರೊನಾ ಸೋಂಕು​ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ

ಮಾರಕ ಕೊರೋನಾ ವೈರಸ್​​​ ರೂಪಾಂತರಿ ಒಮಿಕ್ರಾನ್​​ ಆರ್ಭಟ ಶುರುವಾಗಿರಾಜ್ಯಕ್ಕೂ ಈ ಹೊಸ ವೈರಸ್​ ಕಾಲಿಟ್ಟಿದೆ.

ಕರ್ನಾಟಕದಲ್ಲಿ  ಮೊದಲ ಎರಡು ಒಮಿಕ್ರಾನ್​​ ಕೇಸ್​​ ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ.

ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ B.1.1.529 ತಳಿಯ ಕೇಸ್​ಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ ಅಗರವಾಲ್​​ ಮಾಹಿತಿ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರಿಗೆ ದಕ್ಷಿಣ ಆಫ್ರಿಕಾದದಿಂದ ಬಂದ ಇಬ್ಬರಿಗೆ ಒಮಿಕ್ರಾನ್​​ ಸೋಂಕು ತಗುಲಿರುವುದು ಧೃಡಪಟ್ಟಿದೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರಿಗೆ ಕ್ವಾರಂಟೈನ್​​ ಮಾಡಲಾಗಿದೆ. ಯಾರಿಗೂ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿ ಎಂದು ಅಗರವಾಲ್​​ ಹೇಳಿದರು.

ಬೆಂಗಳೂರಿನವರಾದ ಇವರು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ನವೆಂಬರ್‌ ಮೊದಲ ವಾರ ಬೆಂಗಳೂರಿಗೆ ಬಂದಿದ್ದರು

ಓಮಿಕ್ರಾನ್‌ ಪೀಡಿತರಲ್ಲಿ ಒಬ್ಬ ಬೊಮ್ಮನಹಳ್ಳಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ.
ಇವರಿಬ್ಬರ ಸಂಪರ್ಕದಲ್ಲಿದ್ದವರನ್ನು ಗುರುತಿಸಲಾಗಿದೆ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಸರ್ಕಾರ ಅಲರ್ಟ್‌ ಆಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆಯುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024