January 29, 2026

Newsnap Kannada

The World at your finger tips!

WhatsApp Image 2023 02 14 at 8.28.04 PM

ನವೆಂಬರ್ 15 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಬಿವೈ ವಿಜಯೇಂದ್ರ

Spread the love

ತುಮಕೂರು :

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ನಂತರ ಬಿ. ವೈ ವಿಜಯೇಂದ್ರ ಭಾನುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ಅಧಿಕಾರ ಸ್ವೀಕರಿಸುತ್ತೇನೆ ಎಂದು ತಿಳಿಸಿದರು.

ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ.

ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.ಪಕ್ಷದ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸುತ್ತೇನೆ

ಚುನಾವಣೆ ಇರೋದ್ರಿಂದ ರಾಷ್ಟ್ರೀಯ ನಾಯಕರು ಯಾರೂ ಆಗಮಿಸಲು ಆಗುತ್ತಿಲ್ಲ ವೀಕ್ಷಕರು ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಮಠಕ್ಕೆ ಭೇಟಿ :

ಅಧಿಕಾರ ಸ್ವೀಕಾರಕ್ಕೂ ಮುನ್ನ ಸಿದ್ದಗಂಗಾ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ.

ಹಿರಿಯ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದ್ದೇನೆ. ಯಡಿಯೂರಪ್ಪನವರೂ ಕೂಡಾ ಎಲ್ಲಾ ನಿರ್ಣಯಕ್ಕೂ ಮುನ್ನ ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆಯುತಿದ್ದರು. ನಾನು ಕೂಡಾ ರಾಜ್ಯಾಧ್ಯಕ್ಷನಾಗಿ ಅಧಿಕಾರ ಹಿಡಿಯುವ ಮುನ್ನ ಆಶೀರ್ವಾದ ಪಡೆದಿದ್ದೇನೆ.

ನ.15 ರಂದು ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಮಾರನೇ ದಿನ ನ.16ರಂದು ಬೆಂಗಳೂರಿನ ಅರಮನೆ ಮೈದಾನಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕರ್ತರ ಸಭೆ ನಡೆಯಲಿದೆ. ಪಕ್ಷದ ಎಲ್ಲಾ ಹಿರಿಯ ಮುಖಂಡರ ಯತ್ನಾಳ್ ಹಾಗೂ ಸೋಮಣ್ಣ , ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇರುತ್ತಾರೆ.

error: Content is protected !!