March 12, 2026

Newsnap Kannada

The World at your finger tips!

ROHINI1

ಆಗಸ್ಟ್ 19 ರಂದು ರೋಹಿಣಿ ಸಿಂಧೂರಿಗೆ ಮೈಸೂರಿನಲ್ಲಿ ವಿಚಾರಣೆ

Spread the love

ಆಗಸ್ಟ್ 19 ರಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಸಂಗ್ರಹ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮೈಸೂರಿಗೆ ಮಾಜಿ ಜಿಲ್ಲಾಧಿಕಾರಿ ಆಗಮಿಸಲಿದ್ದಾರೆ.

ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಗರಣಗಳು ನಡೆದಿವೆ ಎನ್ನಲಾಗಿರುವ ಆರೋಪಗಳ ಬಗ್ಗೆ ತನಿಖೆ ನಡೆಯಲಿದೆ.

ಈ ಹಿಂದೆ ಸಾ.ರಾ.ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು.

ನಿಯಮ ಬಾಹಿರವಾಗಿ ಈಜುಕೊಳ ನಿರ್ಮಾಣ ಮಾಡಲಾಗಿದೆ. ಜಿಲ್ಲಾಧಿಕಾರಿ ನಿವಾಸಕ್ಕೆ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ ಮಾಡಲಾಗಿದೆ ಎಂದು ಸಾ.ರಾ.ಮಹೇಶ್ ಆರೋಪ ಮಾಡಿದ್ದರು. ಈ ಸಂಬಂಧ ರೋಹಿಣಿ ಸಿಂಧೂರಿ ವಿಚಾರಣೆಯನ್ನು ಎದುರಿಸಲಿದ್ದಾರೆ.

error: Content is protected !!