ಆಗಸ್ಟ್ 19 ರಂದು ರೋಹಿಣಿ ಸಿಂಧೂರಿಗೆ ಮೈಸೂರಿನಲ್ಲಿ ವಿಚಾರಣೆ

Team Newsnap
0 Min Read

ಆಗಸ್ಟ್ 19 ರಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಸಂಗ್ರಹ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮೈಸೂರಿಗೆ ಮಾಜಿ ಜಿಲ್ಲಾಧಿಕಾರಿ ಆಗಮಿಸಲಿದ್ದಾರೆ.

ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಗರಣಗಳು ನಡೆದಿವೆ ಎನ್ನಲಾಗಿರುವ ಆರೋಪಗಳ ಬಗ್ಗೆ ತನಿಖೆ ನಡೆಯಲಿದೆ.

ಈ ಹಿಂದೆ ಸಾ.ರಾ.ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು.

ನಿಯಮ ಬಾಹಿರವಾಗಿ ಈಜುಕೊಳ ನಿರ್ಮಾಣ ಮಾಡಲಾಗಿದೆ. ಜಿಲ್ಲಾಧಿಕಾರಿ ನಿವಾಸಕ್ಕೆ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ ಮಾಡಲಾಗಿದೆ ಎಂದು ಸಾ.ರಾ.ಮಹೇಶ್ ಆರೋಪ ಮಾಡಿದ್ದರು. ಈ ಸಂಬಂಧ ರೋಹಿಣಿ ಸಿಂಧೂರಿ ವಿಚಾರಣೆಯನ್ನು ಎದುರಿಸಲಿದ್ದಾರೆ.

Share This Article
Leave a comment