ನಗರದ ಮುದ್ದುರಾಮ ಪ್ರತಿಷ್ಠಾನವು ಜುಲೈ 23ರಂದು ಸಂಜೆ 4.15ಕ್ಕೆ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮುದ್ದುರಾಮ ಪ್ರಶಸ್ತಿ/ಪುರಸ್ಕಾರ ಹಾಗೂ ಕೃತಿಗಳ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ.
2023ನೇ ಸಾಲಿನ ಮುದ್ದುರಾಮ ಪ್ರಶಸ್ತಿಯನ್ನು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗುವುದು. 50 ಸಾವಿರ ಗೌರವಧನ ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಚೌಪದಿ ರಚನೆಕಾರ ಎಂ.ಮುತ್ತುಸ್ವಾಮಿ ಅವರಿಗೆ ಮುದ್ದುರಾಮ ಪುರಸ್ಕಾರ ನೀಡಲಾಗುವುದು.
ಇದು 25 ಸಾವಿರ ಗೌರವಧನ ಹಾಗೂ ಫಲಕವನ್ನು ಒಳಗೊಂಡಿರುತ್ತದೆ. ಇದೇ ಸಮಾರಂಭದಲ್ಲಿ ಹಿರೇಮಗಳೂರು ಕಣ್ಣನ್ ಅವರ ಕವಿ ಕೆ.ಸಿ.ಶಿವಪ್ಪ ಕುರಿತ ‘ಮುದ್ದುರಾಮ ಲಹರಿ’ ಹಾಗೂ ಶ್ವೇತಾ ಪ್ರಕಾಶ್ ಅವರ ಚೌಪದಿಗಳ ಸಂಕಲನ ‘ಪದ್ಮ ಪಲ್ಲವ’ ಕೃತಿಗಳು ಬಿಡುಗಡೆ ಆಗಲಿವೆ.
ಅಂದಿನ ಸಮಾರಂಭದ ಸಾನ್ನಿಧ್ಯವನ್ನು ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಹಾಗೂ ವಾಗ್ಮಿ ಎಂ.ಕೃಷ್ಣೇಗೌಡ ಭಾಗವಹಿಸುವರು.
ಹಿರಿಯ ಸಾಹಿತಿ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳು ಅಧ್ಯಕ್ಷತೆ ವಹಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India