ರಾಜಕೀಯದಲ್ಲಿ ಹಾವು-ಮುಂಗುಸಿಯಂತೆ ಬಡಿದಾಡುವ ಮೂವರು ರಾಜಕೀಯ ವಿರೋಧಿಗಳನ್ನು ಅಪರೂಪಕ್ಕೆ ಒಂದೆಡೆ ಸೇರುವಂತೆ ಮಾಡಿದ ಸಮಾರಂಭ ಚನ್ನಪಟ್ಟಣದಲ್ಲಿಂದು ನಡೆಯಿತು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ದಲಿತ ಕವಿ ಸಿದ್ಧಲಿಂಗಯ್ಯನವರ ಸ್ಮರಣಾರ್ಥ ಕಾರ್ಯಕ್ರಮ ನಡೆಯಿತು. ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ. ಸುರೇಶ್ ಮತ್ತು ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಲ್ಲಿದ್ದ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವೇದಿಕೆಯ ಮುಂಭಾಗದ ಒಂದೇ ಸಾಲಿನಲ್ಲಿ ಕುಳಿತಿದ್ದರು.
ರಾಜಕೀಯ ವಿದ್ಯಮಾನಗಳನ್ನು ಗಮನಿಸುತ್ತಿರುವವರಿಗೆ ಇದೊಂದು ಅಪರೂಪದ ದೃಶ್ಯವಾಗಿತ್ತು. ಮೂರೂ ಪಕ್ಷದ ಕಾರ್ಯಕರ್ತರಿಗೂ ಈ ಸನ್ನಿವೇಶ ಪುಳಕವುಂಟುಮಾಡಿತ್ತು.
ಕುಮಾರಸ್ವಾಮಿ ಅವರ ಪಕ್ಕದಲ್ಲಿ ಡಿ.ಕೆ.ಸುರೇಶ್ ಆಸೀನರಾಗಿದ್ದರು.
ನಂತರ ಬಂದ ಯೋಗೇಶ್ವರ್ ಸುರೇಶ್ ಪಕ್ಕದ್ದಲ್ಲಿ ಕುಳಿತುಕೊಂಡು ಉಭಯಕುಶಲೋಪರಿ ನಡೆಸಿದರು. ಈ ಇಬ್ಬರು ಮುಖಂಡರು ಆಗಾಗ್ಗೆ ಮಾತನಾಡುತ್ತಿದ್ದರೂ ಎಚ್ಡಿಕೆ ಏನೂ ಮಾತನಾಡಲಿಲ್ಲ. ಕಾರ್ಯಕ್ರಮದ ಉದ್ಘಾಟನೆಯ ಸಮಯದಲ್ಲೂ ಎಚ್ಡಿಕೆ ಮತ್ತು ಯೋಗೇಶ್ವರ ಮಧ್ಯೆ ಡಿ.ಕೆ.ಸುರೇಶ್ ಇದ್ದದ್ದು ಗಮನಾರ್ಹ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment