ಮುಳಬಾಗಿಲು ಪತ್ರಕರ್ತನಿಗೆ ಒಂದುಕಾಲು ಲಕ್ಷ ರು ಪರಿಹಾರ – ಸಿಎಂ

Team Newsnap
1 Min Read
Bommai sets stage for JDS-BJP alliance during 'Loka' elections 'ಲೋಕಾ 'ಚುನಾವಣೆ ವೇಳೆಗೆ ಜೆಡಿಎಸ್ - ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು - ಬೊಮ್ಮಾಯಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೆಂಕಟಾಚಲ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದುಕಾಲು ಲಕ್ಷ ರು ಪರಿಹಾರ ಮಂಜೂರು ಮಾಡಿದ್ದಾರೆ.

ಕೊಲಾರವಾಣಿ, ಕೋಲಾರ ಪತ್ರಿಕೆ, ಹೊನ್ನುಡಿ, ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದ
ಹಿರಿಯ ಪತ್ರಕರ್ತ ವೆಂಕಟಾಚಲ ಅವರು ಇತ್ತೀಚಿಗೆ ತೀವ್ರ ಅನಾರೋಗ್ಯ ಕಾರಣ ಆಸ್ಪತ್ರೆ ದಾಖಲಾಗಿ ಸುಮಾರು ನಾಲ್ಕು ಲಕ್ಷ ಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು.

ಈ ಬಗ್ಗೆ ಕೆಯುಡಬ್ಲ್ಯೂಜೆ ಗೆ ಮನವಿ ಸಲ್ಲಿಸಿ ನೆರವಿಗೆ ಕೋರಿದ್ದರು. ನೆರವು ಕೊಡಿಸುವಂತೆ ಕೋಲಾರ ಪತ್ರಕರ್ತರ ಸಂಘವು ಮನವಿ ಮಾಡಿತ್ತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಮಂಜೂರು ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆ ಸಲ್ಲಿಸಿದೆ.

Share This Article
Leave a comment