ಮದುವೆ ಸಮಾರಂಭಗಳಲ್ಲಿ ಭಾಗಿಯಾಗಲು 40 ಜನರಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ದಿಂದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಡೆಲ್ಟಾ ಪ್ಲಸ್ ವೈರಸ್ ಸೋಂಕಿನ ಹಿನ್ನೆಲೆ ವೈರಸ್ ಬಗ್ಗೆ ನಿಗಾ ಇಡಲು ಸರ್ಕಾರ ಸೂಚನೆ ನೀಡಿದೆ.
ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರ ಬಗ್ಗೆ ತೀವ್ರ ನಿಗಾ ಇಡುವುದು , ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನರಿಗೆ ಸೀಮಿತಗೊಳಿಸಿ ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರದಿಂದ ಜಾರಿಯಾಗಲಿದೆ.
ಮದುವೆ ಸಮಾರಂಭಕ್ಕೆ 40 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಈಗಾಗಲೇ ಪಾಸಿಟಿವಿಟಿ ದರ ಕಡಿಮೆಗೊಂಡಿದ್ದಂತ ಅನೇಕ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ 2.0 ಮಾರ್ಗಸೂಚಿ ಕ್ರಮಗಳನ್ನು, ಇದೀಗ ಮುಂದುವರೆದು ಪಾಸಿಟಿವಿಟಿ ದರ ಕಡಿಮೆಗೊಂಡಂತ ನಾಲ್ಕು ಜಿಲ್ಲೆಗಳಲ್ಲಿಯೂ ಅನ್ ಲಾಕ್ ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಿದೆ.
ಕಂದಾಯ ಇಲಾಖೆಯ ಸರ್ಕಾರ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಅಧಿಸೂಚನೆ ಹೊರಡಿಸಿದ್ದಾರೆ. ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಂತ ಚಾಮರಾಜನಗರ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಕೆಟಗರಿ 1ರ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೇ ಕಟೆಗರಿ 3ನೇ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯನ್ನು ಕೊರೋನಾ ಸೋಂಕಿನ ಪ್ರಕರಣಗಳ ಇಳಿಕೆಯಿಂದಾಗಿ ಕೆಟಗರಿ 2ಕ್ಕೆ ಸೇರಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ