ಹಾಸನದ ಇತಿಹಾಸ ಪ್ರಸಿದ್ದ ಹಾಸನಾಂಬ ದೇವಿಯ ದರ್ಶನಕ್ಕೆ ಅಕ್ಟೋಬರ್ 28 ರಿಂದ, ಸಾರ್ವಜನಿಕರಿಗೆ ಅವಕಾಶ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಗೋಪಾಲಯ್ಯ ರಾಜ್ಯದಲ್ಲಿ ದಸರಾ ನಡೆದಿದೆ, ಶಾಲೆಗಳು ಆರಂಭವಾಗಿವೆ. ಹೀಗಾಗಿ ಮೊದಲ ದಿನ, ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ ಏಳು ದಿನಗಳು ಸಾರ್ವಜನಿಕರು ದೇವಿ ದರ್ಶನ ಮಾಡಲು ಅವಕಾಶವಿದೆ ಎಂದಿದ್ದಾರೆ.
ದೇವಸ್ಥಾನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡ್, ಐಡಿ ಕಾರ್ಡ್ ತರಬೇಕು ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ ಇದೆ ಎಂದಿದ್ದಾರೆ.
ಬಿಜೆಪಿಗೆ ಹೋಗಿ ಅಂತ ಹೇಳಿದ್ದೇ ಜಮೀರ್ :
ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಕಾಂಗ್ರೆಸ್ ಸರ್ಕಾರ ಇರೋದು ಇಷ್ಟ ಇರಲಿಲ್ಲ. ಹೀಗಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆದಾಗುತ್ತೆ ನನ್ನನ್ನು ಬಿಜೆಪಿಗೆ ಹೋಗು ಅಂದ್ರು ಅಂತ ಸಚಿವ ಗೋಪಾಲಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನಾನು, ಜಮೀರ್ ಒಳ್ಳೆ ಸ್ನೇಹಿತರು. ನಾನು ಬಿಜೆಪಿಯಲ್ಲೇ ಇರ್ತಿನಿ, ನನ್ನ ಮಕ್ಕಳಿಗೂ ಇದೇ ಮಾತು ಹೇಳುತ್ತೆನೆ. ನಾನು ಇಲ್ಲಿ ಸಚಿವನಾಗಿದ್ದೇನೆ, ಬಿಜೆಪಿ ಪಕ್ಷ ನನಗೆ ಎಲ್ಲಾ ಕೊಟ್ಟಿದೆ.ಜಮೀರ್ ಬಿಜೆಪಿಗೆ ಬರ್ತಾರಾ? ಎಂಬ ಪ್ರಶ್ನೆಗೆ, ಇದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸಚಿವರು ಚುಟುಕಾಗಿ ಹೇಳಿದರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!