Categories: Main News

ನಮ್ಮೆಲ್ಲರ ಆಹಾರ ಅನಿವಾರ್ಯವಾಗದೆ ಆಯ್ಕೆಗಳಾಗಲಿ

ಬೆಳಗಿನ ಉಪಹಾರ

೧) ಮೊದಲನೇ ಆಯ್ಕೆ,

ಹಸಿ ಮೊಳಕೆ ಕಾಳುಗಳು, ಬೇಯಿಸಿದ ಅಥವಾ ಹಸಿ ತರಕಾರಿಗಳು, ಹಣ್ಣುಗಳು, ಒಣ ಹಣ್ಣುಗಳು ( ಬಾದಾಮಿ ದ್ರಾಕ್ಷಿ ಗೋಡಂಬಿ ಪಿಸ್ತಾ ಅಂಜೂರ ವಾಲ್ ನಟ್ ) ( ಅಭ್ಯಾಸ ಇದ್ದವರಿಗೆ ಮೊಟ್ಟೆ ) ಕಾರ್ನ್ ಪ್ಲೆಕ್ಸ್, ಓಟ್ಸ್ ಬ್ರೆಡ್ ಹಾಲು.

೨) ಎರಡನೇ ಆಯ್ಕೆ,

ಇಡ್ಲಿ ವಡೆ ದೋಸೆ ಚಿತ್ರಾನ್ನ ಪಲಾವ್ ಅವಲಕ್ಕಿ ಉಪ್ಪಿಟ್ಟು ಸಿರಿ ಧಾನ್ಯಗಳು ಮತ್ತು ಆಯಾ ಪ್ರದೇಶದ ಸ್ಥಳೀಯ ತಿಂಡಿಗಳು.

೩) ಮೂರನೇ ಆಯ್ಕೆ.

ಇಂದಿರಾ ಕ್ಯಾಂಟೀನಿನ ೫ ರೂಪಾಯಿ ತಿಂಡಿ ಅಥವಾ ರಸ್ತೆ ಬದಿಯ ಅತ್ಯಂತ ಕಡಿಮೆ ಬೆಲೆಯ ಉಪಹಾರ ಅಥವಾ ಸ್ಥಳೀಯ ಪ್ರದೇಶದ ಗಂಜಿಗಳು.

ಮಧ್ಯಾಹ್ನದ ಊಟ


೧) ಮೊದಲನೇ ಆಯ್ಕೆ.

ಬಗೆ ಬಗೆಯ ಸೂಪುಗಳು
ಮುದ್ದೆ ಚಪಾತಿ ರೋಟಿ ರೊಟ್ಟಿ ಅನ್ನ ಸಾಂಬಾರ್ ದಾಲ್ ಸಿಹಿ ತರಕಾರಿಗಳು ಹಣ್ಣುಗಳು (ಅಭ್ಯಾಸ ಇರುವವರಿಗೆ ಮೊಟ್ಟೆ ಕೋಳಿ ಮೀನು ಮಾಂಸ )

೨) ಎರಡನೇ ಆಯ್ಕೆ.

ಮುದ್ದೆ ಸಾಂಬಾರ್,
ಅಥವಾ
ರೋಟಿ ದಾಲ್,
ಅಥವಾ
ರೊಟ್ಟಿ ಪಲ್ಯ,
ಅಥವಾ
ಚಪಾತಿ ಪಲ್ಯ,
ಅಥವಾ,
ಅನ್ನ ಸಾಂಬಾರ್,
ಅಥವಾ ಮೊಸರನ್ನ,
ಅಥವಾ ಗಂಜಿ,
ಅಥವಾ ಸ್ಥಳೀಯ ಆಹಾರ.

೩) ಮೂರನೇ ಆಯ್ಕೆ,

ಇಂದಿರಾ ಕ್ಯಾಂಟೀನ್ ಅಥವಾ ಧರ್ಮ ಛತ್ರ ಅಥವಾ ಅತ್ಯಂತ ಕಡಿಮೆ ಬೆಲೆಯ ಯಾವುದೋ ಒಂದು ಆಹಾರ.

ರಾತ್ರಿ ಊಟ


೧) ಮೊದಲನೇ ಆಯ್ಕೆ,

ಬಗೆಬಗೆಯ ಸೂಪುಗಳು,
ಒಣ ಹಣ್ಣುಗಳ ಕಿಚಡಿ, ತರಕಾರಿಗಳು ಹಣ್ಣುಗಳು ಕೇಕುಗಳು.

೨) ಎರಡನೇ ಆಯ್ಕೆ,

ಬಹುತೇಕ ಮಧ್ಯಾಹ್ನ ಉಳಿದ ಪದಾರ್ಥಗಳು ಅಥವಾ ಅದೇ ರೀತಿಯ ಆಹಾರ

೩) ಮೂರನೇ ಆಯ್ಕೆ,

ಇಂದಿರಾ ಕ್ಯಾಂಟೀನ್ ಅಥವಾ ದೇವಸ್ಥಾನ ಅಥವಾ ಧರ್ಮ ಛತ್ರ ಅಥವಾ ಅತ್ಯಂತ ಕಡಿಮೆ ಬೆಲೆಯ ಆಹಾರ ಅಥವಾ ಉಪವಾಸ.

ಈಗ ಮುಖ್ಯ ವಿಷಯಕ್ಕೆ ಬರುತ್ತೇನೆ.
೧ ನೇ ನಂಬರಿನ ಆಹಾರ ಸಾಮಾನ್ಯವಾಗಿ ಶ್ರೀಮಂತರದು,
೨ ನೇ ನಂಬರಿನ ಆಹಾರ
ಮಧ್ಯಮ ವರ್ಗಗಳದು ಮತ್ತು ೩ ನೇ ನಂಬರಿನ ಆಹಾರ ಕಡು ಬಡವರದು.

ಶ್ರೀಮಂತರಿಗೆ ಆಯ್ಕೆಗಳಿರುತ್ತದೆ.
ಮಧ್ಯಮ ವರ್ಗದವರಿಗೆ ಅನಿವಾರ್ಯ ಮತ್ತು ಬಡವರಿಗೆ ಆಯ್ಕೆಗಳೇ ಇರುವುದಿಲ್ಲ.

ವಾಸ್ತವದಲ್ಲಿ ಶ್ರೀಮಂತರ ಮೊದಲನೇ ನಂಬರಿನ ಆಹಾರವೇ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ಪ್ರತಿನಿತ್ಯ ಸೇವಿಸಬೇಕಾದ ಅತ್ಯಂತ ಪೌಷ್ಟಿಕ ಮತ್ತು ಆರೋಗ್ಯಕರ ಆಹಾರ. ( ವೈದ್ಯಕೀಯ ಕಾರಣ ಹೊರತುಪಡಿಸಿ )

ಎರಡನೆಯ ನಂಬರಿನ ಆಹಾರ ಹಣದ ಕೊರತೆಯಿಂದ ಅನಿವಾರ್ಯವಾಗಿ ಸೇವಿಸಬೇಕಾದ ಆಹಾರ. ಅಷ್ಟೊಂದು ಉತ್ತಮ ಅಲ್ಲ. ಆದರೆ ಬೇರೆ ದಾರಿ ಇಲ್ಲ.

ಮೂರನೇ ನಂಬರಿನ ಆಹಾರ ಬದುಕಲು ಮತ್ತು ಹೊಟ್ಟೆ ತುಂಬಿಸಿಕೊಳ್ಳಲು ಸಿಕ್ಕುವ ಯಾವುದೇ ಆಹಾರವನ್ನು ಅದರ ಗುಣಮಟ್ಟ ಪ್ರಶ್ನಿಸದೆ ತಿನ್ನುವ ಕಡು ಬಡತನದ ಪರಿಸ್ಥಿತಿ.

ಬಡತನ ಒಂದು ಶಾಪ. ಅದು ಅನಿವಾರ್ಯವಾದಾಗ ಅದನ್ನು ಒಪ್ಪಿ ಜೀವಿಸಬೇಕೆ ಹೊರತು ಅದೇ ನಮ್ಮ ಆಯ್ಕೆ ಆಗಬಾರದು.

ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಆಯ್ಕೆಯ ಆಹಾರ ತಮ್ಮ ಜೀವಿತದ ಸಂಪೂರ್ಣ ಕಾಲವೂ ನಿರಂತರ ಸಿಗುವಂತೆ ಮಾಡಬೇಕು ಎಂಬುದು ನಮ್ಮ ಕನಸು.

ಬಡತನದ ಕಾರಣದಿಂದ ಊಟಕ್ಕೆ ಅಲೆದಾಡಿದ ದಿನಗಳು ಮತ್ತು ಸಮಾರಂಭಗಳಲ್ಲಿ ಆಸೆ ಕಣ್ಣುಗಳಿಂದ ನೋಡುತ್ತಿದ್ದ ಭಕ್ಷ್ಯ ಭೋಜನಗಳ ನಡುವಿನ ಅಂತರ ಸದಾ ನನ್ನನ್ನು ಕಾಡುತ್ತಿದೆ…..

  • ವಿವೇಕಾನಂದ. ಹೆಚ್.ಕೆ
Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024