ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಗೇರಿಲ್ಲ ಯುದ್ಧ ಮಾಡಿ ಬ್ರಿಟಿಷರಿಗೆ ಕಾಡಿದ್ದರು. ಅಪ್ರತಿಮ ವೀರ ಆಗಿದ್ದರು, ಅವರನ್ನು ಹಿಡಿಯೋಕೆ ಆಗುತ್ತಿರಲೇ ಇಲ್ಲ. ಆದರೆ ನಮ್ಮವರೇ ಯಾರೋ ಅವರನ್ನು ಹಿಡಿಯೋಕೆ ಸಹಾಯ ಮಾಡಿಬಿಟ್ಟರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇತಿಹಾಸವನ್ನು ನೆನೆಪಿಸಿದರು.
ಮೈಸೂರಿನ ಗಂಧನಹಳ್ಳಿ ಗ್ರಾಮದಲ್ಲಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಗೇರಿಲ್ಲಾ ಯುದ್ಧ ಮಾಡಿ ಬ್ರಿಟಿಷರಿಗೆ ಕಾಡಿದ್ದರು. ಅಪ್ರತಿಮ ವೀರ ಆಗಿದ್ದರು, ಅವರನ್ನು ಹಿಡಿಯೋಕೆ ಆಗುತ್ತಿರಲೇ ಇಲ್ಲ. ಆದರೆ ನಮ್ಮವರೇ ಯಾರೋ ಅವರನ್ನು ಹಿಡಿಯೋಕೆ ಸಹಾಯ ಮಾಡಿಬಿಟ್ಟರು. ಕೊನೆಗೆ ಅವರನ್ನು ಬ್ರಿಟಿಷರು ಗಲ್ಲಿಗೇರಿಸಿದರು. ಇಂತಹ ದೇಶದ್ರೋಹಿಗಳು ಸಮಾಜದಲ್ಲಿ ಯಾವಾಗಲೂ ಇರುತ್ತಾರೆ ಎಂದು ಹೇಳಿದರು
ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು. ಅವರನ್ನು ಗಲ್ಲಿಗೇರಿಸಿದ್ದು ಜನವರಿ 26ರಂದು. ಎರಡು ದಿನ ನಮ್ಮ ದೇಶಕ್ಕೆ ಅತ್ಯಂತ ವಿಶೇಷ ದಿನಗಳು. ನಿಮಗೆ ಗೊತ್ತಾ ಈ ದಿನಗಳು? ಸುಮ್ಮನೆ ಗೊತ್ತಿಲ್ಲದೆ ಮಾತನಾಡಬೇಡಿ. ಕೆಲವರಿಗೆ ಗೊತ್ತಿರುವುದಿಲ್ಲ ಆದರೂ ತಲೆ ಅಲ್ಲಾಡಿಸಿಬಿಡುತ್ತಾರೆ. ತಿಳ್ಕೋಬೇಕು ಇದನ್ನೆಲ್ಲ ಗೊತ್ತಾಯ್ತಾ ಎಂದು ಸಭೆಯಲ್ಲಿದ್ದವರನ್ನು ನಗೆಗಡಲಲ್ಲಿ ತೇಲಿ ಬಿಟ್ಟರು.
ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿಮ್ಮೂರಿನಲ್ಲಿ ನಿರ್ಮಾಣ ಆಗಿದೆ. ಅವರ ಪ್ರತಿಮೆನಾ ಯಾಕೇ ನಿರ್ಮಾಣ ಮಾಡ್ತಾರೆ ಗೊತ್ತಾ? ಅವರಂತೆ ದೇಶ ಪ್ರೇಮ ಹುಟ್ಟಲಿ ಅಂತ. ಕುರುಬ ಜಾತಿಯಲ್ಲಿ ಹುಟ್ಟಿದಕ್ಕೆ ಅವರ ಪ್ರತಿಮೆ ಮಾಡೋದಲ್ಲ. ಅವರೇನು ಅರ್ಜಿ ಹಾಕ್ಕೊಂಡು ಕುರುಬ ಜಾತಿಯಲ್ಲಿ ಹುಟ್ಟಿರಲಿಲ್ಲ. ಇದನ್ನ ಅರ್ಥ ಮಾಡಿಕೊಳ್ಳಿ ಎಂದು ನೆರೆದಿದ್ದ ಜನರಿಗೆ ತಿಳಿ ಹೇಳಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment