ಕರ್ನಾಟಕ ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ
- ಸ್ವಚ್ಛತಾ ಸಿಬ್ಬಂದಿ
- ವಾಹನ ಚಾಲಕರು
- ಡಾಟಾ ಎಂಟ್ರಿ ಆಪರೇಟರ್
- ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ
ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳನ್ನು ಮಹಿಳೆಯರು ಕೂಡ ಸಮರ್ಥರಾಗಿ ನಿರ್ವಹಿಸಬಲ್ಲವರಾಗಿರುತ್ತಾರೆ. ಆದ ಕಾರಣ, ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರ್ಕಾರದ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ.
ಮಹಿಳೆಯರ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಠಿಯಿಂದ ರಾಜ್ಯ ಸರ್ಕಾರವು 1996ರಲ್ಲಿಯೇ ರಾಜ್ಯ ಸಿವಿಲ್ ಸೇವೆಗಳಲ್ಲಿ ಶೇ.30ರಷ್ಟು ನೇರ ನೇಮಕಾತಿ ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿರಿಸಿದೆ ಎಂದು ತಿಳಿಸಿದ್ದಾರೆ.
ಈ ಆದೇಶವನ್ನು ಎಲ್ಲಿ ಅನುಸರಿಸಲಾಗುತ್ತದೆ ?
ಈ ಮೇಲಿನ ಸೂಚನೆಗಳನ್ನು ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರೆ ಸರ್ಕಾರಿ ವಲಯದ ಅಂಗ ಸಂಸ್ಥೆಗಳು ಕೂಡ ಪಾಲಿಸತಕ್ಕದ್ದು. ಈ ಸಂಬಂಧ ಸರ್ಕಾರದ ಎಲ್ಲಾ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಕ್ಷೇತ್ರ ಇಲಾಖೆಗಳು, ಸರ್ಕಾರದ ಅಂಗಸಂಸ್ಥೆಗಳಿಗೆ ಅಗತ್ಯಸೂಚನೆಗಳನ್ನು ನೀಡುವಂತೆ ಸೂಚಿಸಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್