January 28, 2026

Newsnap Kannada

The World at your finger tips!

police 1

ಬಸ್ -ಟಿಪ್ಪರ್ ನಡುವೆ ಓವರ್ ಟೇಕ್ : ಮಹಿಳೆ ಸಾವು

Spread the love

ನಂಜನಗೂಡು :ಸಾರಿಗೆ ಬಸ್ – ಟಿಪ್ಪರ್ ನಡುವಿನ ಓವರ್​​ಟೇಕ್​ ಮಾಡುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಪ್ರಯಾಣಿಕರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ.

ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್​​ನ ಕಿಟಕಿಯಿಂದ ಕತ್ತನ್ನು ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾಗಿದೆ.
ಇದನ್ನು ಓದಿ -ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ

ಈ ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!