ಸಕಾಲಕ್ಕೆ ಆ್ಯಕ್ಸಿಜನ್ ಕೊರತೆ ಯಿಂದಾಗಿ ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ಸೋಮವಾರ ಜರುಗಿದೆ.
ಮೂವರು ಪುರುಷರು ಹಾಗೂ ಓರ್ವ ಮಹಿಳೆ ಆ್ಯಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದರು ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಈ ನಡುವೆ ಆರೋಗ್ಯ ಸಚಿವ ಡಾ. ಸುಧಾಕರ್ ಸುದ್ದಿಗಾರರ ಜೊತೆ ಮಾತನಾಡಿ, ಕೋಲಾರದಲ್ಲಿ ಕೊರೋನಾ ಸೋಂಕಿತರು ಯಾವ ಕಾರಣಕ್ಕಾಗಿ ಸಾವನ್ನಪ್ಪಿದರು ಎಂಬುದರ ಬಗ್ಗೆ ಡಿಎಚ್ ಓ ಅವರಿಂದ ಮಾಹಿತಿ ಪಡೆದುಕೊಳ್ಳುವುದಾಗಿ ತಿಳಿಸಿದರು.
ತುಮಕೂರಿನಲ್ಲಿ 27 ವರ್ಷದ ಯುವಕ ಸಾವು :
ಈ ನಡುವೆ ತುಮಕೂರಿನ ಜಿಲ್ಲಾ ಆಸ್ಪತ್ರೆ ಯಲ್ಲಿ ಡಯಾಲಿಸಸ್ ವಿಭಾಗದ ಮುಖ್ಯಸ್ಥ 27 ವರ್ಷ ಯುವಕ ಉಸಿರಾಟದ ತೊಂದರೆಯಿಂದಾಗಿ ಸಾವನ್ನಪ್ಪಿದರು.
ಕೊರೋನಾ ಸೋಂಕಿತರಾಗಿದ್ದ ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ಮೆ ಸಂಜೆ ತೀವ್ರವಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ